Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:4 - ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ನೀವು ಈಜಿಪ್ಟನ್ನು ಬಿಟ್ಟು ಬರುವಾಗ, ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವುದಕ್ಕೆ ಎದುರುಗೊಳ್ಳಲಿಲ್ಲ. ನಿಮ್ಮನ್ನು ಶಪಿಸುವುದಕ್ಕೆ ಮೆಸೊಪೊತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ಬಿಳಾಮನಿಗೆ ಕೂಲಿ ಕೊಟ್ಟು ನಿಮಗೆ ವಿರೋಧವಾಗಿ ಕರೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ ನೀವು ಈಜಿಪ್ಟ್ ದೇಶದಿಂದ ಬಂದಾಗ ಅವರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರೂರಿನಿಂದ ಅವನನ್ನು ಕರೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾಕಂದರೆ ನೀವು ಐಗುಪ್ತದೇಶದಿಂದ ಬಂದಾಗ [ಅಮ್ಮೋನಿಯರು] ಅನ್ನ ಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; [ಮೋವಾಬ್ಯರು] ನಿಮ್ಮನ್ನು ಶಪಿಸುವದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣ ಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾವಿುನ ಪೆತೋರೂರಿನಿಂದ ಅವನನ್ನು ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ಅವರು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:4
19 ತಿಳಿವುಗಳ ಹೋಲಿಕೆ  

ಏಕೆಂದರೆ ಅವರು ಅನ್ನಪಾನಗಳೊಡನೆ ಇಸ್ರಾಯೇಲರನ್ನು ಎದುರುಗೊಳ್ಳಲಿಲ್ಲ. ಅವರು ಇಸ್ರಾಯೇಲರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಕರೆಸಿದ್ದರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದರು.


ಇವರು ನೇರವಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನು ತೆಗೆದು, ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ?” ಎಂದನು.


ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನು ನನ್ನನ್ನು ಅರಾಮಿನಿಂದಲೂ, ಮೋವಾಬಿನ ಅರಸನು ಪೂರ್ವ ಪರ್ವತಗಳಿಂದಲೂ ಕರೆಯಿಸಿ, ‘ನನಗೋಸ್ಕರ ಯಾಕೋಬನನ್ನು ಶಪಿಸಿ ಬಾ, ಇಸ್ರಾಯೇಲನ್ನು ಎದುರಿಸುವುದಕ್ಕೆ ಬಾ,’ ಎಂದು ನನಗೆ ಹೇಳಿದ್ದಾನೆ.


ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು.


ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗನಾದ ಬಾಲಾಕನು ಎದ್ದು, ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.


ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?


ಈ ಸಂಗತಿಗಳನ್ನು ಮಾಡಿದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು, “ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ನೆರೆಯವರಿಂದ ಪ್ರತ್ಯೇಕಿಸಿಕೊಳ್ಳಲಿಲ್ಲ. ಅವರು ಕಾನಾನ್ಯರು, ಹಿತ್ತಿಯರು, ಪೆರಿಜೀಯರು, ಯೆಬೂಸಿಯರು, ಅಮ್ಮೋನ್ಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಇವರ ಅಸಹ್ಯ ಸಂಗತಿಗಳ ಪದ್ಧತಿಗಳಂತೆ ನಡೆಯುತ್ತಾ ಇದ್ದಾರೆ.


ವೈರಿಯು ಆಕೆಯ ಎಲ್ಲಾ ಬೊಕ್ಕಸಗಳ ಮೇಲೆ ತನ್ನ ಕೈಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರಬಾರದೆಂದು ನೀನು ಆಜ್ಞಾಪಿಸಿದ ಇತರ ಜನಾಂಗಗಳು, ತನ್ನ ಪರಿಶುದ್ಧ ಸ್ಥಳದಲ್ಲಿ ಸೇರುವುದನ್ನು ನೋಡಿದ್ದಾಳೆ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲರೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು