Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:6 - ಕನ್ನಡ ಸಮಕಾಲಿಕ ಅನುವಾದ

6 ನೀವು ಇರುವವರೆಗೆ ಎಂದಿಗೂ ಅವರ ಏಳಿಗೆಯನ್ನು, ಕ್ಷೇಮವನ್ನು ಬಯಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ಜೀವಮಾನಕಾಲವನ್ನೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಮ್ಮೋನಿಯರೊಂದಿಗಾಗಲಿ ಮೋವಾಬ್ಯರೊಂದಿಗಾಗಲಿ ನೀವು ಸಂಧಾನ ಮಾಡಿಕೊಳ್ಳಲೇಬಾರದು; ನಿಮ್ಮ ಜೀವಮಾನವೆಲ್ಲಾ ಅವರೊಂದಿಗೆ ಸ್ನೇಹತ್ವದಲ್ಲಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:6
9 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಪ್ರಬಲವಾಗಿ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಮಕ್ಕಳಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವ ಹಾಗೆ ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆಮಾಡಿಕೊಡಬೇಡಿರಿ. ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೆ ತೆಗೆದುಕೊಳ್ಳಬೇಡಿರಿ. ಅವರ ಸಮಾಧಾನವನ್ನೂ, ಅವರ ಮೇಲನ್ನೂ ಹುಡುಕಲೇ ಬೇಡಿರಿ,’ ಎಂದು ದೇವರೇ ನಮಗೆ ಹೇಳಿದಿರಲ್ಲವೇ?


ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.


ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಬಿಳಾಮನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಈ ಮೂರು ಸಾರಿಯೂ ಆಶೀರ್ವದಿಸಿದೆ.


ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.


ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು