Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:7 - ಕನ್ನಡ ಸಮಕಾಲಿಕ ಅನುವಾದ

7 ಎದೋಮ್ಯನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನು ನಿಮ್ಮ ಸಹೋದರನು; ಈಜಿಪ್ಟಿನವನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನ ದೇಶದಲ್ಲಿ ನೀವು ಪರವಾಸಿಯಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಿಮ್ಮ ಬಂಧುಜನಗಳು. ಈಜಿಪ್ಟರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ಬಂಧುಜನಗಳು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಎದೋಮ್ಯರನ್ನು ನೀವು ದ್ವೇಷಿಸಬಾರದು, ಅವರು ನಿಮ್ಮ ಸಂಬಂಧಿಕರಾಗಿದ್ದಾರೆ. ಈಜಿಪ್ಟಿನವರನ್ನು ನೀವು ದ್ವೇಷಿಸಬಾರದು, ಅವರ ದೇಶದಲ್ಲಿ ನೀವು ಪರದೇಶಿಗಳಾಗಿದ್ದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:7
19 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನೀವು ಪರದೇಶಿಯರನ್ನು ಪ್ರೀತಿಸಿರಿ. ಏಕೆಂದರೆ ನೀವು ಈಜಿಪ್ಟಿನಲ್ಲಿ ಪರದೇಶಿಗಳಾಗಿದ್ದೀರಿ.


“ಪರದೇಶಸ್ಥನನ್ನು ಉಪದ್ರವ ಪಡಿಸಬೇಡಿರಿ ಮತ್ತು ಬಾಧಿಸಲೂ ಬೇಡಿರಿ. ಏಕೆಂದರೆ ನೀವು ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದೀರಿ.


ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೇ ಸ್ವದೇಶದವನಂತಿರಲಿ. ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಏಕೆಂದರೆ ನೀವು ಸಹ ಈಜಿಪ್ಟ್ ದೇಶದಲ್ಲಿ ಪರಕೀಯರಾಗಿದ್ದಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


“ಪರದೇಶಿಯರನ್ನು ಪೀಡಿಸಬಾರದು. ಏಕೆಂದರೆ ಈಜಿಪ್ಟ್ ದೇಶದಲ್ಲಿ ನೀವೂ ಪರದೇಶಿಗಳಾದ್ದಿರಷ್ಟೇ, ಅಂಥವರ ಮನೋವ್ಯಥೆಯನ್ನು ನಿಮಗೆ ತಿಳಿದಿದೆ.


ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಹೋದರರಾದ ಇಸ್ರಾಯೇಲರು ಹೇಳುವುದೇನೆಂದರೆ, ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.


ಏಸಾವನು ಯಾಕೋಬನಿಗೆ, “ಆ ಕೆಂಪಾದ ಪದಾರ್ಥವನ್ನು ತಿನ್ನುವುದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ,” ಎಂದನು. ಆದ್ದರಿಂದ ಅವನಿಗೆ, ಎದೋಮ್, ಎಂದು ಹೆಸರಾಯಿತು.


“ನಾನು ನಿಮ್ಮನ್ನು ಪ್ರೀತಿ ಮಾಡಿದೆನು” ಎಂದು ಯೆಹೋವ ದೇವರು ಹೇಳುತ್ತಾರೆ. “ನೀವಾದರೋ, ‘ಯಾವುದರಲ್ಲಿ ನೀವು ನಮ್ಮನ್ನು ಪ್ರೀತಿ ಮಾಡಿದ್ದೀರಿ?’ ಎಂದು ಕೇಳುತ್ತೀರಿ. “ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದರೂ ನಾನು ಯಾಕೋಬನನ್ನು ಪ್ರೀತಿ ಮಾಡಿದೆನು. ಎಂದು ಯೆಹೋವ ದೇವರು ಅನ್ನುತ್ತಾರೆ.


ಅನಂತರ ಇಸ್ರಾಯೇಲನು ಈಜಿಪ್ಟಿಗೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.


ಇಸ್ರಾಯೇಲರು ಈಜಿಪ್ಟ್ ದೇಶದ ಗೋಷೆನ್ ಪ್ರಾಂತದಲ್ಲಿ ವಾಸವಾಗಿದ್ದು, ಆಸ್ತಿಯನ್ನು ಸಂಪಾದಿಸಿ, ಬೆಳೆದು ಬಹಳವಾಗಿ ವೃದ್ಧಿಹೊಂದಿದರು.


ಯೋಸೇಫನು ತನ್ನ ತಂದೆಯನ್ನೂ, ತನ್ನ ಸಹೋದರರನ್ನೂ, ತನ್ನ ತಂದೆಯ ಮನೆಯವರೆಲ್ಲರನ್ನೂ ಅವರ ಮಕ್ಕಳ ಲೆಕ್ಕದ ಪ್ರಕಾರ ಆಹಾರಕೊಟ್ಟು, ಅವರನ್ನು ಸಂರಕ್ಷಿಸಿದನು.


ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.


ಅವನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮೊಕ್ಕಳನ್ನೂ, ಅಂತೂ ತನ್ನ ಇಡೀ ಕುಟುಂಬದವರೆಲ್ಲರನ್ನೂ ತನ್ನೊಂದಿಗೆ ಈಜಿಪ್ಟಿಗೆ ಕರೆದುಕೊಂಡು ಹೋದನು.


ಅವರಿಗೆ ಹುಟ್ಟುವ ಮಕ್ಕಳಲ್ಲಿ ಮೂರನೆಯ ತಲಾಂತರದವರು ಯೆಹೋವ ದೇವರ ಸಭೆಯಲ್ಲಿ ಸೇರಬಹುದು.


ಹದದನು ಮಾಡಿದ ಕೇಡಿಗೆ ಹೊರತಾಗಿ ಇವನು ಸೊಲೊಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲಿಗೆ ಶತ್ರುವಾಗಿದ್ದನು. ಅವನು ಇಸ್ರಾಯೇಲನ್ನು ಹಗೆಮಾಡಿ, ಅರಾಮ್ ದೇಶವನ್ನು ಆಳುತ್ತಾ ಇದ್ದನು.


ಆದ್ದರಿಂದ ನೀವು ಪ್ರಬಲವಾಗಿ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಮಕ್ಕಳಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವ ಹಾಗೆ ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆಮಾಡಿಕೊಡಬೇಡಿರಿ. ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೆ ತೆಗೆದುಕೊಳ್ಳಬೇಡಿರಿ. ಅವರ ಸಮಾಧಾನವನ್ನೂ, ಅವರ ಮೇಲನ್ನೂ ಹುಡುಕಲೇ ಬೇಡಿರಿ,’ ಎಂದು ದೇವರೇ ನಮಗೆ ಹೇಳಿದಿರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು