Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:12 - ಕನ್ನಡ ಸಮಕಾಲಿಕ ಅನುವಾದ

12 ಹತ್ತನೆಯ ಪಾಲನ್ನು ಕೊಡುವ ವರ್ಷವಾಗಿರುವ ಮೂರನೆಯ ವರ್ಷದಲ್ಲಿ ನೀವು ನಿಮ್ಮ ಎಲ್ಲಾ ಹುಟ್ಟುವಳಿಯ ಹತ್ತನೆಯ ಪಾಲನ್ನು ಪ್ರತ್ಯೇಕಿಸಿದಾಗ, ನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ದಿಕ್ಕಿಲ್ಲದವರೂ ವಿಧವೆಯರೂ ಉಂಡು ತೃಪ್ತರಾಗುವಂತೆ ಅದನ್ನು ಅವರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರು, ಪರದೇಶಿಗಳು, ತಾಯಿತಂದೆಯಿಲ್ಲದವರು ಹಾಗು ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ತಾಯಿತಂದೆಯಿಲ್ಲದವರೂ ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಪ್ರತೀ ಮೂರನೆಯ ವರ್ಷವು ದಶಮಾಂಶದ ವರ್ಷವಾಗಿರುವುದು. ಆಗ ನಿಮ್ಮ ಬೆಳೆಯ ಹತ್ತನೆಯ ಒಂದು ಅಂಶವನ್ನು ಲೇವಿಯರಿಗೂ ಪರದೇಶಸ್ಥರಿಗೂ ಅನಾಥರಿಗೂ ವಿಧವೆಯರಿಗೂ ಕೊಡಬೇಕು. ಆಗ ಅವರಿಗೆ ಊಟಮಾಡಲು ಸಾಕಷ್ಟು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:12
11 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಯೆಹೋವ ದೇವರಿಗೆ ಬಲಿಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ. ಆದಕಾರಣ, ‘ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸೊತ್ತು ಇರಬಾರದು ಎಂದು ನಾನು ಅವರಿಗೆ ಹೇಳಿದ್ದೇನೆ,’ ” ಎಂದರು.


“ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು.


ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು.


ನಿಜವಾಗಿಯೂ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಮೋಶೆಯ ನಿಯಮದಲ್ಲಿ ಅಪ್ಪಣೆಯಿದೆ.


ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಂದೆತಾಯಿ ಇಲ್ಲದವರೂ ಹಾಗೂ ವಿಧವೆಯರೂ ಸಂಭ್ರಮದಿಂದಿರಬೇಕು.


ಇದು ಮಾತ್ರವಲ್ಲದೆ ದಶಮಭಾಗಗಳನ್ನು ತೆಗೆದುಕೊಳ್ಳುವ ಲೇವಿಯೂ ಅಬ್ರಹಾಮನ ಮೂಲಕ ದಶಮಭಾಗಗಳನ್ನು ಕೊಟ್ಟ ಹಾಗಾಯಿತು.


ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ಉಳಿದ ನಾಲ್ಕು ಪಾಲು ಹೊಲದ ಬೀಜಕ್ಕಾಗಿಯೂ, ನಿಮ್ಮ ಆಹಾರಕ್ಕಾಗಿಯೂ, ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ,” ಎಂದನು.


ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬುದನ್ನು ಈಜಿಪ್ಟಿನ ಭೂಮಿಗೆ ಇಂದಿನವರೆಗೂ ನಿಯಮವಾಗಿ ಸ್ಥಾಪಿಸಿದನು. ಯಾಜಕರ ಭೂಮಿಯು ಮಾತ್ರ ಫರೋಹನದಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು