Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:15 - ಕನ್ನಡ ಸಮಕಾಲಿಕ ಅನುವಾದ

15 ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀವು ನಿಮ್ಮ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಯೇಲರನ್ನು ಹಾಗು ಹಾಲೂಜೇನೂ ಹರಿಯುವ ನಾಡೆಂದು ನೀವು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂಮಿಯನ್ನು ಆಶೀರ್ವದಿಸಿ, ದೇವರೇ,’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ನಿನ್ನ ಪರಿಶುದ್ಧವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ ನಿನ್ನ ಜನರಾದ ಇಸ್ರಾಯೇಲ್ಯರನ್ನೂ ಹಾಲೂ ಜೇನೂ ಹರಿಯುವ ದೇಶವೆಂದು ನೀನು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂವಿುಯನ್ನೂ ಆಶೀರ್ವದಿಸು ದೇವರೇ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿನ್ನ ಪರಿಶುದ್ಧ ನಿವಾಸದಿಂದ ನನ್ನನ್ನು ನೋಡು. ನಿನ್ನ ಜನಾಂಗವಾದ ಇಸ್ರೇಲನ್ನು ಆಶೀರ್ವದಿಸು. ನೀನು ನಮಗೆ ಕೊಟ್ಟಿರುವ ದೇಶವನ್ನು ಆಶೀರ್ವದಿಸು. ಸಮೃದ್ಧಿಯಿಂದ ಕೂಡಿದ ಈ ದೇಶವನ್ನು ನಮಗೆ ಕೊಡುವೆ ಎಂದು ನಮ್ಮ ಪೂರ್ವಿಕರಿಗೆ ನೀನು ವಾಗ್ದಾನ ಮಾಡಿರುವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:15
26 ತಿಳಿವುಗಳ ಹೋಲಿಕೆ  

ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?


ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”


“ ‘ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ. ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ? ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ?


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ವಾಸವಾಗಿರುವರೋ? ಇಗೋ, ಆಕಾಶವೂ ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?


“ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: “ ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ,


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನಮ್ಮ ದೇವರಾದ ಯೆಹೋವ ದೇವರ ಮೆಚ್ಚುಗೆಯು ನಮ್ಮ ಮೇಲೆ ಇರಲಿ. ನಮ್ಮ ಕೈಗಳ ಕೆಲಸವನ್ನು ಸ್ಥಿರಪಡಿಸಿರಿ. ಹೌದು, ನಮ್ಮ ಕೈಗಳ ಕೆಲಸವನ್ನು ಸ್ಥಾಪಿಸಿರಿ.


ನಿಮ್ಮ ಮೆಚ್ಚುಗೆಯಿಂದ ಚೀಯೋನಿಗೆ ಸಮೃದ್ಧಿಯನ್ನು ನೀಡಿರಿ, ಯೆರೂಸಲೇಮಿನ ಗೋಡೆಗಳನ್ನು ಕಟ್ಟಿರಿ.


ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.


ಆಗ ನಾವು ನಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ಮೊರೆಯಿಟ್ಟೆವು. ಯೆಹೋವ ದೇವರು ನಮ್ಮ ಸ್ವರವನ್ನು ಕೇಳಿ, ನಮ್ಮ ಸಂಕಟವನ್ನೂ ಕಷ್ಟವನ್ನೂ ದಬ್ಬಾಳಿಕೆಯನ್ನೂ ನೋಡಿದರು.


ನಮ್ಮನ್ನು ಈ ಸ್ಥಳಕ್ಕೆ ಕರೆತಂದು, ಹಾಲೂ ಜೇನೂ ಹರಿಯುವ ದೇಶವಾಗಿರುವ ಈ ದೇಶವನ್ನು ನಮಗೆ ಕೊಟ್ಟಿದ್ದಾರೆ.


ದುಃಖದ ಸಮಯದಲ್ಲಿ ಪರಿಶುದ್ಧವಾದದ್ದರಲ್ಲಿ ಏನೂ ತಿನ್ನಲಿಲ್ಲ. ಅಶುದ್ಧರಾಗಿ ಅದರಿಂದ ತೆಗೆದುಕೊಂಡು ಉಪಯೋಗಿಸಲಿಲ್ಲ. ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ. ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿದ್ದೇವೆ. ನಮಗೆ ಆಜ್ಞಾಪಿಸಿದ್ದೆಲ್ಲಾ ಮಾಡಿದ್ದೇವೆ.


ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.


ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, ವಿಧವೆಯರಿಗೆ ರಕ್ಷಕರಾಗಿದ್ದಾರೆ.


ಸೇನಾಧೀಶ್ವರ ದೇವರೇ, ನಿಮ್ಮ ದರ್ಶನವಾಗಲಿ. ನೀವು ಪರಲೋಕದಿಂದ ಕಟಾಕ್ಷಿಸಿರಿ. ಈ ದ್ರಾಕ್ಷಾಲತೆಯನ್ನು ಪರಾಮರಿಸಿರಿ.


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ.


ನಿಮ್ಮ ಬಲಗೈ ನೆಟ್ಟ ಸಸಿಯನ್ನೂ ನೀವು ನಿಮಗೆ ಬೆಳಸಿಕೊಂಡ ಬಳ್ಳಿಯನ್ನೂ ಪರಾಮರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು