Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:19 - ಕನ್ನಡ ಸಮಕಾಲಿಕ ಅನುವಾದ

19 ದೇವರು ನಿರ್ಮಿಸಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ನಿಮ್ಮನ್ನು ಕೀರ್ತಿಯಲ್ಲಿಯೂ, ಪ್ರಸಿದ್ಧತೆಯಲ್ಲಿಯೂ, ಘನತೆಯಲ್ಲಿಯೂ, ಸ್ಥಾಪಿಸುವುದಾಗಿ ನಿಮ್ಮ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದಂತೆ ನೀವು ಅವರಿಗೆ ಪರಿಶುದ್ಧ ಜನರಾಗಬೇಕೆಂದೂ ಘೋಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರೆಂದೂ ಒಡಂಬಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಎಲ್ಲಾ ಜನಾಂಗಗಳಿಗಿಂತ ನಿಮ್ಮನ್ನು ಬಲಿಷ್ಠರಾದ ಜನಾಂಗವನ್ನಾಗಿ ಮಾಡುವನು. ದೇವರು ನಿಮಗೆ ಜನರಿಂದ ಹೊಗಳಿಕೆಯನ್ನು, ಪ್ರಖ್ಯಾತಿಯನ್ನು ಮತ್ತು ಗೌರವವನ್ನು ಬರಮಾಡುವನು; ಆತನು ವಾಗ್ದಾನ ಮಾಡಿದಂತೆಯೇ ನೀವು ಪವಿತ್ರ ಜನರಾಗುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:19
21 ತಿಳಿವುಗಳ ಹೋಲಿಕೆ  

ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಲೋಕದ ಎಲ್ಲಾ ಜನಾಂಗಗಳಿಗಿಂತ ಉನ್ನತ ಸ್ಥಿತಿಯಲ್ಲಿರಿಸುವರು.


ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ.


ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.


ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ.’ ಇಸ್ರಾಯೇಲರಿಗೆ ನೀನು ಹೇಳಬೇಕಾದ ಮಾತುಗಳು ಇವೇ,” ಎಂದರು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಆ ಕಾಲದಲ್ಲಿ ನಿನ್ನನ್ನು ಪೀಡಿಸುವವರನ್ನೆಲ್ಲಾ ದಂಡಿಸುವೆನು, ಕುಂಟಾದದ್ದನ್ನು ರಕ್ಷಿಸಿ, ಚದರಿಹೋದವರನ್ನು ಕೂಡಿಸುವೆನು; ಅವರು ಅವಮಾನ ಹೊಂದಿದ ದೇಶಗಳಲ್ಲೆಲ್ಲಾ ಅವರಿಗೆ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ಯಾವ ಪ್ರಕಾರ ಇದು ಮನುಷ್ಯನ ನಡುವಿಗೆ ಹತ್ತಿಕೊಳ್ಳುವುದೋ, ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ, ಯೆಹೂದದ ಮನೆತನವನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು, ಆದರೆ ಅವರು ಕೇಳದೇ ಹೋದರು ಎಂದು ಯೆಹೋವ ದೇವರ ಅನ್ನುತ್ತಾರೆ.’


ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ನೀವು ಕೇಳಿ ಕಾಪಾಡಿ ಕೈಗೊಂಡರೆ, ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು. ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ.


ನೀವು ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಪಾಲಿಸಿ, ಅವರ ಮಾರ್ಗಗಳಲ್ಲಿ ನಡೆದರೆ, ಯೆಹೋವ ದೇವರು ನಿಮಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ತಮಗೆ ಮೀಸಲಾದ ಪರಿಶುದ್ಧ ಜನರನ್ನಾಗಿ ಸ್ಥಾಪಿಸುವರು.


ಮೋಶೆ ಮತ್ತು ಇಸ್ರಾಯೇಲಿನ ಹಿರಿಯರು ಜನರಿಗೆ, “ನಾವು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು.


ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಆ ಕಾಲದಲ್ಲಿ ನಾನು ನಿಮ್ಮನ್ನು ಒಟ್ಟುಗೂಡಿಸುವೆನು. ಆ ಸಮಯದಲ್ಲಿ ನಾನು ಮನೆಗೆ ನಿಮ್ಮನ್ನು ಕರೆದುಕೊಂಡು ಬರುವೆನು. ನಾನು ನಿಮ್ಮ ಸೌಭಾಗ್ಯವನ್ನು ನಿಮ್ಮ ಕಣ್ಣೆದುರಿಗೆ ಪುನಃಸ್ಥಾಪಿಸಿ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆಯನ್ನೂ ಉಂಟುಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಈಗ ನೀವು ನನ್ನ ಮಾತನ್ನು ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿದರೆ, ಸಮಸ್ತ ಜನರಲ್ಲಿ ನೀವು ನನ್ನ ಸಂಗ್ರಹಿಸಿದ ಸೊತ್ತಾಗಿರುವಿರಿ. ಏಕೆಂದರೆ ಭೂಮಿಯೆಲ್ಲಾ ನನ್ನದೇ.


ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ, ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ, ಭಯಪಡಬೇಡಿರಿ, ನಿಮ್ಮ ಕೈಗಳು ಬಲವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು