Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:5 - ಕನ್ನಡ ಸಮಕಾಲಿಕ ಅನುವಾದ

5 ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:5
28 ತಿಳಿವುಗಳ ಹೋಲಿಕೆ  

ಎಪ್ಪತ್ತು ಮಂದಿಯಾಗಿ ನಿಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡಿದ್ದಾರೆ.


ಅವರಲ್ಲದೆ ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಪುತ್ರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಈಜಿಪ್ಟಿಗೆ ಹೋದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.


ಆದರೆ ಯಾಕೋಬನು ತಾನು ಹೋಗುವುದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ವಂಚಿಸಿ ಓಡಿಹೋದನು.


ಅಲ್ಲಿ ನಿನ್ನನ್ನು ಪೋಷಿಸುವೆನು. ಏಕೆಂದರೆ ಇನ್ನೂ ಕ್ಷಾಮದ ಐದು ವರ್ಷಗಳಿವೆ. ನಿನಗೂ, ನಿನ್ನ ಮನೆಗೂ, ನಿನಗಿರುವುದೆಲ್ಲದಕ್ಕೂ ಬಡತನವಾಗಬಾರದು’ ಎಂದು ಹೇಳಿರಿ.


ಆದ್ದರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವುದಕ್ಕೂ, ದೊಡ್ಡ ಬರಗಾಲದಿಂದ ನಿಮ್ಮ ಪ್ರಾಣಗಳನ್ನು ಉಳಿಸುವುದಕ್ಕೂ ದೇವರು ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ.


ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಬಂದಿರಬಹುದು.


ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.


ಆಗ ಯಾಕೋಬನು ಈಜಿಪ್ಟಿಗೆ ಹೋದನು, ಅಲ್ಲಿಯೇ ಅವನೂ ನಮ್ಮ ಪಿತೃಗಳೂ ಮೃತರಾದರು.


ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು. ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ, ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.


ನನ್ನ ದೇಶಕ್ಕೂ, ಬಂಧುಗಳ ಬಳಿಗೂ ಹೋಗಿ ನನ್ನ ಮಗ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಂಡು ಬರುತ್ತೇನೆಂದು ಪರಲೋಕದ ಮತ್ತು ಭೂಲೋಕದ ದೇವರಾಗಿರುವ ಯೆಹೋವ ದೇವರ ಮೇಲೆ ನೀನು ನನಗೆ ಪ್ರಮಾಣಮಾಡಬೇಕು,” ಎಂದನು.


ನೀವು ಎಲ್ಲಾ ಜನರಿಗಿಂತ ಹೆಚ್ಚಾಗಿರುವ ಕಾರಣ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ. ನೀವು ಎಲ್ಲಾ ಜನರಿಗಿಂತ ಸಂಖ್ಯಾತರು.


ಆದರೆ ಈಜಿಪ್ಟನವರು ಅವರನ್ನು ಎಷ್ಟು ಶ್ರಮಪಡಿಸಿದರೋ, ಅಷ್ಟು ಅಧಿಕವಾಗಿ ಅವರು ಹೆಚ್ಚಿ ಹರಡಿಕೊಂಡದ್ದರಿಂದ ಈಜಿಪ್ಟಿನವರು ಇಸ್ರಾಯೇಲರ ಬಗ್ಗೆ ಹೆದರಿದವರಾದರು.


ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹರಡಿಕೊಂಡು ಬಲಗೊಂಡರು, ಅದರಿಂದ ಆ ದೇಶವು ಅವರಿಂದ ತುಂಬಿತು.


ಯಾಕೋಬನ ವಂಶಜರು ಒಟ್ಟು ಎಪ್ಪತ್ತು ಮಂದಿ ಆದರೆ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.


ಇಸ್ರಾಯೇಲರು ಈಜಿಪ್ಟ್ ದೇಶದ ಗೋಷೆನ್ ಪ್ರಾಂತದಲ್ಲಿ ವಾಸವಾಗಿದ್ದು, ಆಸ್ತಿಯನ್ನು ಸಂಪಾದಿಸಿ, ಬೆಳೆದು ಬಹಳವಾಗಿ ವೃದ್ಧಿಹೊಂದಿದರು.


ನನ್ನ ಸ್ಥಿತಿ ಹೀಗೆ ಇತ್ತು: ಹಗಲಲ್ಲಿ ಬಿಸಿಲಿನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನನ್ನ ಕಣ್ಣುಗಳಿಗೆ ನಿದ್ರೆ ತಪ್ಪಿಹೋಯಿತು.


ಇಸಾಕನು ಯಾಕೋಬನನ್ನು ಕಳುಹಿಸಿದಾಗ, ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿ ರೆಬೆಕ್ಕಳ ಸಹೋದರ ಅರಾಮಿನವನಾದ ಬೆತೂಯೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.


ಏಸಾವನು ತನ್ನ ತಂದೆಯು ಅವನಿಗೆ ಕೊಟ್ಟ ಆಶೀರ್ವಾದಕ್ಕೋಸ್ಕರ ಯಾಕೋಬನನ್ನು ದ್ವೇಷಿಸಿದನು. ಏಸಾವನು, “ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸಮೀಪವಾಗಿವೆ. ತರುವಾಯ ನಾನು ನನ್ನ ಸಹೋದರ ಯಾಕೋಬನನ್ನು ಕೊಲ್ಲುವೆನು,” ಎಂದು ತನ್ನಲ್ಲಿಯೇ ಅಂದುಕೊಂಡನು.


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ದೇಶದಲ್ಲಿ ಪ್ರವಾಸಮಾಡುವುದಕ್ಕಾಗಿ ಬಂದಿದ್ದೇವೆ. ಏಕೆಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವುದರಿಂದ, ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವುದರಿಂದ ನಿನ್ನ ದಾಸರು ಗೋಷೆನ್ ಪ್ರಾಂತದ ನಿವಾಸಿಗಳಾಗುವಂತೆ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇವೆ,” ಎಂದರು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಿದ್ದಾರೆ. ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.


ಆಗ ಯಾಜಕನು ಆ ಬುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದು, ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠದ ಮುಂದೆ ಇಡಬೇಕು.


ಪ್ರವಾದಿಯಿಂದ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಬರಮಾಡಿ, ಆ ಪ್ರವಾದಿಯಿಂದಲೇ ಆತನು ಅವರನ್ನು ಕಾಪಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು