Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:15 - ಕನ್ನಡ ಸಮಕಾಲಿಕ ಅನುವಾದ

15 “ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:15
44 ತಿಳಿವುಗಳ ಹೋಲಿಕೆ  

“ನಿಮಗಾಗಿ ದೇವರುಗಳ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಕೊಳ್ಳಬಾರದು.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


“ ‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


“ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನೀನು ಆತ್ಮದಲ್ಲಿ ಮಾತ್ರ ಸ್ತೋತ್ರ ಮಾಡಿದರೆ, ತಿಳುವಳಿಕೆ ಇಲ್ಲದೆ ಕುಳಿತಿರುವವನು ನಿನ್ನ ಕೃತಜ್ಞತಾಸ್ತುತಿಗೆ, “ಆಮೆನ್” ಎಂದು ಹೇಳುವುದು ಹೇಗೆ?


ನನ್ನ ಹೊರತಾಗಿ ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.


ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು.


ಯೆಹೂದದವರು ಸಹ ತಮ್ಮ ಯೆಹೋವ ದೇವರ ಆಜ್ಞೆಗಳನ್ನು ಕೈಕೊಳ್ಳದೆ, ಇಸ್ರಾಯೇಲರ ಪದ್ಧತಿಗಳಲ್ಲಿಯೇ ನಡೆದರು.


ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.


ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದ ಬೊಂಬೆಗಳನ್ನೂ ನೀವು ನೋಡಿದ್ದೀರಲ್ಲವೇ?


ಶಪಿಸುವಂಥ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ತೊಡೆಯನ್ನು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ ಎಂದು ಹೇಳಬೇಕು, ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣ ಮಾಡಿಸಬೇಕು.” “ ‘ಅದಕ್ಕೆ ಆ ಸ್ತ್ರೀಯು, “ಆಮೆನ್, ಆಮೆನ್,” ಎಂದು ಹೇಳಬೇಕು.


ಆದರೆ ರಾಹೇಲಳು ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು, ಅದರ ಮೇಲೆ ಕುಳಿತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದರೂ, ಅವನು ಅವುಗಳನ್ನು ಕಾಣಲಿಲ್ಲ.


ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕೆ ಹೋಗಿದ್ದನು. ಆಗ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.


ನಂತರ ಅವನು ಹೀಗೆಂದನು, “ಕಾನಾನನು ಶಾಪಗ್ರಸ್ತನಾಗಲಿ, ಅವನು ತನ್ನ ಸಹೋದರರಿಗೆ ದಾಸಾನುದಾಸನಾಗಿರಲಿ.”


ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ


“ಆಮೆನ್, ಯೆಹೋವ ದೇವರು ಹಾಗೆಯೇ ಮಾಡಲಿ; ನೀನು ಪ್ರವಾದಿಸಿದೆ; ನಿನ್ನ ವಾಕ್ಯಗಳನ್ನು ಯೆಹೋವ ದೇವರು ನೆರವೇರಿಸಿ, ಯೆಹೋವ ದೇವರ ಆಲಯದ ಪಾತ್ರೆಗಳನ್ನೂ, ಸೆರೆಯವರೆಲ್ಲರನ್ನೂ ಬಾಬಿಲೋನಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” “ಓ ಯೆಹೋವ ದೇವರೇ, ಹಾಗೆಯೇ ಆಗಲಿ,” ಎಂದೆನು.


ನೀನು ಅವರಿಗೆ ಹೇಳಬೇಕಾದುದು: ಇಸ್ರಾಯೇಲ್ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.


“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.


ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ, ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ಕಾಪಾಡು,” ಎಂದು ಬೇಡಿಕೊಳ್ಳುವನು.


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು.


ಆದ್ದರಿಂದ ನೀನು ಅವರ ಸಂಗಡ ಮಾತನಾಡಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲಿ ನೆಲೆಗೊಳಿಸಿ, ತಮ್ಮ ಅಕ್ರಮದ ವಿಘ್ನಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬರುವ ಅವನಿಗೆ ಯೆಹೋವ ದೇವರಾದ ನಾನು ಅವರ ವಿಗ್ರಹಗಳ ಸಮೂಹಕ್ಕೆ ತಕ್ಕ ಹಾಗೆ ಉತ್ತರಕೊಡುವೆನು.


ಲೇವಿಯರು ಇಸ್ರಾಯೇಲ್ ಜನರೆಲ್ಲರಿಗೆ ಗಟ್ಟಿಯಾದ ಧ್ವನಿಯಿಂದ,


ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ, ಜನರೆಲ್ಲರೂ, “ಆಮೆನ್,” ಎಂದು ಹೇಳಲಿ. ನೀವು, “ಯೆಹೋವ ದೇವರನ್ನು ಸ್ತುತಿಸಿರಿ,” ಎಂದು ಹೇಳಿದರು.


ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ.


ನಿಮ್ಮಿಂದ ಮಕ್ಕಳೂ, ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು, ತರುವಾಯ ಯಾವುದಾದರೂ ಕೆತ್ತಿದ ವಿಗ್ರಹವನ್ನು ಮಾಡಿ ನಿಮ್ಮನ್ನು ಕೆಡಿಸಿಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಅವರಿಗೆ ಕೋಪಗೊಳಿಸಿದರೆ,


ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ಅವುಗಳ ಮೇಲಿರುವ ಬೆಳ್ಳಿಬಂಗಾರವನ್ನು ಆಶಿಸಿ ನೀವು ತೆಗೆದುಕೊಳ್ಳಬಾರದು. ಅದು ನಿಮಗೆ ಉರುಲಾದೀತು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.


ಅವನು ಆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ತನ್ನ ತಾಯಿಗೆ ತಿರುಗಿ ಕೊಟ್ಟಾಗ, ಅವನ ತಾಯಿ, “ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡುವುದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಯೆಹೋವ ದೇವರಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದ್ದೆನು; ಆದ್ದರಿಂದ ನಾನು ಅದನ್ನು ನಿನಗೆ ತಿರುಗಿ ಕೊಡುವೆನು,” ಎಂದಳು.


ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರುಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡಿದನು. ಅವು ಮೀಕನ ಮನೆಯಲ್ಲಿದ್ದವು.


ಬಡಗಿಯು ಮರಕ್ಕೆ ನೂಲನ್ನು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ. ಉಳಿಬಾಚಿಗಳಿಂದ ಕೆತ್ತುತ್ತಾನೆ. ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾರಕ್ಕೆ ತಂದು, ಮಂದಿರದಲ್ಲಿ ಇಡಲು ಮನುಷ್ಯನ ಅಂದದಂತೆ ರೂಪಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು