ಧರ್ಮೋಪದೇಶಕಾಂಡ 27:15 - ಕನ್ನಡ ಸಮಕಾಲಿಕ ಅನುವಾದ15 “ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |
ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.