Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:2 - ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಯೊರ್ದನನ್ನು ದಾಟಿ ಪ್ರವೇಶಿಸುವಾಗ, ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2-3 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ ಅಂದರೆ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ತಾವು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ, ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಬೇಕು. ಅವುಗಳಿಗೆ ಗಿಲಾವು ಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ಅಂದರೆ ನಿಮ್ಮ ಪಿತೃಗಳ ದೇವರಾದ ಯೆಹೋವನು ತಾನು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ದೇಶವನ್ನು ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವುಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಪ್ರವೇಶಿಸುವಿರಿ. ಆ ದಿವಸ ದೊಡ್ಡ ದೊಡ್ಡ ಕಲ್ಲುಗಳನ್ನು ರಾಶಿ ಹಾಕಿ ಅದನ್ನು ಗಾರೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:2
16 ತಿಳಿವುಗಳ ಹೋಲಿಕೆ  

ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.


ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು.


ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ, ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಯೆಹೋವ ದೇವರಿಗೆ ಉಳಿಮುಟ್ಟದ ಪೂರ್ಣವಾದ ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನ ಸಮರ್ಪಣೆಗಳನ್ನೂ ಅರ್ಪಿಸಿದರು.


ಜನರೆಲ್ಲರು ಯೊರ್ದನ್ ನದಿಯ ಆಚೆಗೆ ದಾಟಿದ ಮೇಲೆ, ಯೆಹೋವ ದೇವರು ಯೆಹೋಶುವನೊಂದಿಗೆ ಮಾತನಾಡಿ,


“ನೀವು ಪಾಳೆಯದ ಮಧ್ಯದಲ್ಲಿ ನಡೆದುಹೋಗಿ ಜನರಿಗೆ, ‘ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನ್ ನದಿಯನ್ನು ದಾಟಿ ಹೋಗಬೇಕು,’ ಎಂದು ತಿಳಿಸಿರಿ,” ಎಂದನು.


ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಪ್ರಕಾರ ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಹಾಲೂ ಜೇನೂ ಹರಿಯುವಂಥ ದೇಶವನ್ನು ನೀವು ಪ್ರವೇಶಿಸುವಂತೆ ಯೊರ್ದನ್ ನದಿಯನ್ನು ದಾಟುವಾಗ, ಅವುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಆ ಕಲ್ಲಿನ ಮೇಲೆ ಬರೆಯಬೇಕು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವತ್ತಾಗಿ ಕೊಡುವ ದೇಶಕ್ಕೆ ನೀವು ಬಂದು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಿರಿ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಿ ಹೋಗಬೇಕು. ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ,


ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಬೋಧಿಸಲು ನನಗೆ ನಡೆಸಿದ ಈ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನೂ ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದವುಗಳು ಇವೇ.


ಮೋಶೆ ಮತ್ತು ಇಸ್ರಾಯೇಲಿನ ಹಿರಿಯರು ಜನರಿಗೆ, “ನಾವು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು.


ನೀವು ಯೊರ್ದನನ್ನು ದಾಟಿದ ಮೇಲೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.


ಆಗ ಯೆಹೋಶುವನು ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.


ಅಲ್ಲಿ ಅವನು ಇಸ್ರಾಯೇಲರ ಸಮಕ್ಷಮದಲ್ಲಿ ಮೋಶೆ ಬರೆದಿದ್ದ ಮೋಶೆಯ ನಿಯಮದ ಪ್ರತಿಯನ್ನು ಬರೆದನು.


ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು ಅವುಗಳನ್ನು ಶಾಶ್ವತ ಶಾಸನವಾಗಿ ಮಾಡಿದ್ದರೆ ಎಷ್ಟೋ ಒಳಿತು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು