ಧರ್ಮೋಪದೇಶಕಾಂಡ 28:15 - ಕನ್ನಡ ಸಮಕಾಲಿಕ ಅನುವಾದ15 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕೈಗೊಳ್ಳದೇ ಹೋದರೆ, ಈ ಎಲ್ಲಾ ಶಾಪಗಳು ನಿಮ್ಮ ಮೇಲೆ ಬಂದು ನಿಮ್ಮನ್ನು ಹಿಡಿದುಕೊಳ್ಳುವವು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ, ಈ ಕೆಳಕಂಡ ಅಶುಭಗಳು ನಿಮಗೆ ಪ್ರಾಪ್ತವಾಗುವುವು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಅಶುಭಗಳು ನಿಮಗೆ ಪ್ರಾಪ್ತವಾಗುವವು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಆಜ್ಞೆ, ಕಟ್ಟಳೆಗಳಿಗೆ ನೀವು ವಿಧೇಯರಾಗದಿದ್ದರೆ ಈ ಕೆಟ್ಟ ಸಂಗತಿಗಳು ನಿಮಗೆ ತಟ್ಟುವವು: ಅಧ್ಯಾಯವನ್ನು ನೋಡಿ |
ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.