Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:21 - ಕನ್ನಡ ಸಮಕಾಲಿಕ ಅನುವಾದ

21 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವವರೆಗೆ ಯೆಹೋವ ದೇವರು ನಿಮಗೆ ವ್ಯಾಧಿಯು ಅಂಟಿಕೊಳ್ಳುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ವ್ಯಾಧಿ ನಿಮಗೆ ಹತ್ತಿಕೊಂಡೇ ಇರುವಂತೆ ಮಾಡಿ ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಸರ್ವೇಶ್ವರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಸ್ವಾಸ್ತ್ಯವಾಗಿ ಹೊಂದಲಿರುವ ದೇಶದಿಂದ ನೀವು ನಾಶವಾಗುವವರೆಗೆ, ನಿಮ್ಮ ದೇವರಾದ ಯೆಹೋವನು ನಿಮಗೆ ಭಯಂಕರವಾದ ರೋಗಗಳನ್ನು ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:21
14 ತಿಳಿವುಗಳ ಹೋಲಿಕೆ  

ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು.


ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ”


ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಮರಣಕ್ಕೆ ಇರುವವರು ಮರಣಕ್ಕೆ; ಖಡ್ಗಕ್ಕೆ ಇರುವವರು ಖಡ್ಗಕ್ಕೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ; ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು.


ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲ ಮಾಡುವೆನು. ನಿನ್ನನ್ನು ಅವರಿಗಿಂತ ದೊಡ್ಡದಾದ ಮತ್ತು ಬಲವುಳ್ಳ ಜನಾಂಗವನ್ನಾಗಿ ಮಾಡುವೆನು,” ಎಂದರು.


“ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.”


ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ಆದರೂ, ವ್ಯಾಧಿಯಿಂದ ಸತ್ತವರು 24,000 ಮಂದಿಯಾಗಿದ್ದರು.


ಆಗ ಅವರು ಫರೋಹನಿಗೆ, “ಹಿಬ್ರಿಯರ ದೇವರು ನಮ್ಮನ್ನು ಸಂದರ್ಶಿಸಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿವಸ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞ ಅರ್ಪಿಸುವುದಕ್ಕೆ ನಾವು ಹೋಗಬೇಕು. ಇಲ್ಲವಾದರೆ ಅವರು ಉಪದ್ರವದಿಂದಲೋ ಖಡ್ಗದಿಂದಲೋ ನಮ್ಮನ್ನು ದಂಡಿಸುವರು,” ಎಂದರು.


ಯೇಸು ಅಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯೊಂದಿಗೆ ಯೇಸುವಿನ ಬಳಿಗೆ ಬಂದು, ಅದನ್ನು ಅವರ ತಲೆಯ ಮೇಲೆ ಸುರಿದಳು.


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ, ನಿಮ್ಮ ಯೌವನಸ್ಥರನ್ನೂ ಖಡ್ಗದಿಂದ ಕೊಂದು ಹಾಕಿದ್ದೇನೆ. ನಿಮ್ಮ ಪಾಳೆಯಗಳ ದುರ್ವಾಸನೆಯು ನಿಮ್ಮ ಮೂಗು ಸಹಿಸದ ಹಾಗೆ ಮಾಡಿದ್ದೇನೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆರೂಸಲೇಮಿಗೆ ವಿರೋಧವಾಗಿ ದಂಡು ಕಟ್ಟಿಕೊಂಡಿರುವ ಎಲ್ಲಾ ಜನರನ್ನು ಯೆಹೋವ ದೇವರು ವ್ಯಾಧಿಯಿಂದ ಬಾಧಿಸುವರು. ಹೀಗೆಯೇ, ಅವರು ನಿಂತಿರುವಾಗ, ಅವರ ಮಾಂಸವು ಕ್ಷಯಿಸಿ ಹೋಗುವುವು. ಅವರ ಕಣ್ಣುಗಳು ಕುಣಿಗಳಲ್ಲಿ ಇಂಗಿ ಹೋಗುವುವು. ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು