Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:27 - ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು ನಿಮ್ಮನ್ನು ಈಜಿಪ್ಟನ್ನು ಬಾಧಿಸುವಂತೆ ಹುಣ್ಣುಗಳಿಂದಲೂ, ಮೂಲವ್ಯಾಧಿಯಿಂದಲೂ, ಕಜ್ಜಿಯಿಂದಲೂ, ಇಸುಬಿನಿಂದಲೂ ನೀವು ವಾಸಿಯಾಗದ ರೋಗಗಳಿಂದ ನಿಮ್ಮನ್ನು ಬಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಈಜಿಪ್ಟರನ್ನು ಬಾಧಿಸಿದಂತೆ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಸರ್ವೇಶ್ವರ ನಿಮ್ಮನ್ನು ಬಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಈಜಿಪ್ಟಿನವರಿಗೆ ಕಳುಹಿಸಿದಂತೆ ನಿಮಗೂ ಮೈಯಲ್ಲಿ ಬಾಧಿಸುವ ಹುಣ್ಣುಗಳನ್ನು ಕಳುಹಿಸುವನು. ದೇಹದಲ್ಲಿ ಗಡ್ಡೆಗಳುಂಟಾಗುವವು. ಕೀವುಸೋರುವ ಹುಣ್ಣುಗಳು, ಗುಣವಾಗದ ತುರಿಸುವ ಕಜ್ಜಿಗಳು ಉಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:27
16 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು.


ಯೆಹೋವ ದೇವರು ನಿಮ್ಮನ್ನು ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ವಾಸಿಯಾಗದ ಕೆಟ್ಟ ಉರಿ ಹುಣ್ಣಿನಿಂದ ಅಂಗಾಲು ಮೊದಲ್ಗೊಂಡು ನೆತ್ತಿಯವರೆಗೆ ಹೊಡೆಯುವರು.


ಗೂನು ಬೆನ್ನುಳ್ಳವನು, ಗಿಡ್ಡನು, ಕಣ್ಣುಗಳಲ್ಲಿ ನ್ಯೂನತೆವುಳ್ಳವನು, ಕಜ್ಜಿತುರಿಗಳುಳ್ಳವನು, ತನ್ನನ್ನು ನಪುಂಸಕನನ್ನಾಗಿ ಮಾಡಿಕೊಂಡವನು,


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ಆಗ ಅದು ಈಜಿಪ್ಟ್ ದೇಶದಲ್ಲೆಲ್ಲಾ ಪುಡಿಯಾಗುವುದು. ಅದು ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವುದು,” ಎಂದು ಹೇಳಿದರು.


ಆದ್ದರಿಂದ ಯೆಹೋವ ದೇವರು ಚೀಯೋನ್ ಪುತ್ರಿಯರ ನಡುನೆತ್ತಿಗೆ ಹುಣ್ಣನ್ನು ಅನುಮತಿಸಿ, ಅವರನ್ನು ಬೋಳುಮಾಡುವರು.”


ತಮ್ಮ ವೈರಿಗಳನ್ನು ದಂಡಿಸಿದರು. ನಿತ್ಯನಿಂದೆಯೇ ಅವರ ಪಾಲಾಯಿತು.


ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.


ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು.


ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ ಈಜಿಪ್ಟಿನವರ ಮೇಲೆಯೂ ಇದ್ದವು.


ಯೆಹೋವ ದೇವರು ಎಲ್ಲಾ ರೋಗಗಳನ್ನು ನಿಮ್ಮಿಂದ ತೆಗೆದುಬಿಡುವರು. ನಿಮಗೆ ತಿಳಿದಿರುವ ಈಜಿಪ್ಟಿನ ಕ್ರೂರರೋಗಗಳನ್ನು ನಿಮ್ಮ ಮೇಲೆ ಬರಮಾಡದ, ನಿಮ್ಮನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರಮಾಡುವರು.


ಯೆಹೋವ ದೇವರು ನಿಮ್ಮನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಕಾಡುವರು.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ, ನಿಮ್ಮ ಯೌವನಸ್ಥರನ್ನೂ ಖಡ್ಗದಿಂದ ಕೊಂದು ಹಾಕಿದ್ದೇನೆ. ನಿಮ್ಮ ಪಾಳೆಯಗಳ ದುರ್ವಾಸನೆಯು ನಿಮ್ಮ ಮೂಗು ಸಹಿಸದ ಹಾಗೆ ಮಾಡಿದ್ದೇನೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಅವರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗುವಂಥ ಬೊಕ್ಕೆಗಳಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು