Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:30 - ಕನ್ನಡ ಸಮಕಾಲಿಕ ಅನುವಾದ

30 ನೀವು ಮದುವೆಮಾಡಿಕೊಳ್ಳಲು ನಿಶ್ಚಯಿಸಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಗೊಳಿಸುವನು. ಮನೆಯನ್ನು ಕಟ್ಟಿದರೆ, ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟರೆ, ಅದರ ಫಲ ನಿಮಗೆ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ನೀವು ಮದುವೆಮಾಡಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿದ ದ್ರಾಕ್ಷಿತೋಟದ ಬೆಳೆ ನಿಮಗೆ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷೇತೋಟದ ಬೆಳೆಯು ನಿಮಗೆ ದೊರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನೀವು ಮದುವೆಯಾಗಲು ಕನ್ನಿಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವಿರಿ. ಆದರೆ ಬೇರೊಬ್ಬನು ಆಕೆಯನ್ನು ಕೂಡುವನು. ನೀವೊಂದು ಮನೆಯನ್ನು ಕಟ್ಟುವಿರಿ. ಆದರೆ ಬೇರೊಬ್ಬನು ಅದರಲ್ಲಿ ವಾಸಿಸುವನು. ನೀವು ದ್ರಾಕ್ಷಾತೋಟ ಮಾಡಿ ದ್ರಾಕ್ಷಾಲತೆಗಳನ್ನು ನೆಡುವಿರಿ. ಆದರೆ ಅದರ ಫಲಗಳನ್ನು ನೀವು ಕೂಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:30
19 ತಿಳಿವುಗಳ ಹೋಲಿಕೆ  

ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


ನನ್ನ ಹೆಂಡತಿ ಮತ್ತೊಬ್ಬನಿಗೋಸ್ಕರ ಧಾನ್ಯಬೀಸಲಿ, ಮತ್ತೊಬ್ಬರು ಅವಳ ಸಂಗಡ ಮಲಗಲಿ.


ಆದ್ದರಿಂದ ಅವರ ಸಂಪತ್ತು ಕೊಳ್ಳೆಯಾಗುವುದು, ಅವರ ಮನೆಗಳು ಹಾಳಾಗುವುವು. ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು. ದ್ರಾಕ್ಷಿತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.”


ನೀನು ಬೀಜ ಬಿತ್ತಿ ಕೊಯ್ಯದೆ ಇರುವೆ; ಹಿಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವೆ; ದ್ರಾಕ್ಷಾರಸಮಾಡಿ ಕುಡಿಯದೆ ಇರುವೆ.


ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.


ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ, ನಮ್ಮ ಮನೆಗಳು ಪರರಿಗೂ ವಶವಾದವು.


ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”


ಸೆರೆಯವರು ಕೂಡ ಶಾಂತವಾಗಿರುತ್ತಾರೆ; ಬಾಧೆಪಡಿಸುವವನ ಶಬ್ದವನ್ನು ಕೇಳುವುದಿಲ್ಲ.


ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆಯೇ ಕೊಯ್ಯುವರು, ಆದರೆ ನೀವು ಅದರ ಮಾಂಸ ತಿನ್ನುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಕಣ್ಣ ಮುಂದೆಯೇ ಬಲಾತ್ಕಾರದಿಂದ ತೆಗೆದುಕೊಂಡು ಹೋಗುವರು. ಅದು ನಿಮಗೆ ಮತ್ತೆ ಸಿಕ್ಕುವುದಿಲ್ಲ. ನಿಮ್ಮ ಕುರಿಗಳು ನಿಮ್ಮ ಶತ್ರುವಿಗೆ ಕೊಡಲಾಗುವುದು. ಅವುಗಳನ್ನು ಬಿಡಿಸುವುದಕ್ಕೆ ಯಾರೂ ಇರುವುದಿಲ್ಲ.


“ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ, ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು, ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲು ಹೊತ್ತಿನಲ್ಲಿಯೇ ಅವರ ಸಂಗಡ ಮಲಗುವನು.


ಅವರ ಮನೆಗಳೂ ಹೊಲಗಳೂ, ಹೆಂಡತಿಯರೂ ಸಹಿತವಾಗಿ ಬೇರೊಬ್ಬರ ಪಾಲಾಗುವುವು. ಏಕೆಂದರೆ, ದೇಶದ ನಿವಾಸಿಗಳ ಮೇಲೆ ನನ್ನ ಕೈಚಾಚುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವನು ತನ್ನ ಪ್ರಯಾಸದ ಫಲವನ್ನು ಸವಿಯದೆ ಪರರಿಗೆ ಕೊಡಬೇಕಾಗುವುದು; ಅವನು ತಾನು ಪಡೆದ ಲಾಭದ ಆನಂದವನ್ನು ಅನುಭವಿಸುವುದಿಲ್ಲ.


ಯೆಹೋವ ದೇವರು ತನ್ನ ಬಲಗೈಯಿಂದಲೂ, ತನ್ನ ಬಲವುಳ್ಳ ತೋಳಿನಿಂದಲೂ ಆಣೆಯಿಟ್ಟು ಹೇಳಿದ್ದೇನೆಂದರೆ: “ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವುದಿಲ್ಲ. ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ವಿದೇಶಿಯರು ಕುಡಿಯುವುದಿಲ್ಲ.


ಅವರು ಚೀಯೋನಿನಲ್ಲಿ ಸ್ತ್ರೀಯರ ಮೇಲೆ ಮತ್ತು ಯೆಹೂದದ ನಗರಗಳಲ್ಲಿ ಕನ್ಯೆಯರ ದೌರ್ಜನ್ಯ ಮಾಡಲಾಗಿದೆ.


ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು