Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:31 - ಕನ್ನಡ ಸಮಕಾಲಿಕ ಅನುವಾದ

31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆಯೇ ಕೊಯ್ಯುವರು, ಆದರೆ ನೀವು ಅದರ ಮಾಂಸ ತಿನ್ನುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಕಣ್ಣ ಮುಂದೆಯೇ ಬಲಾತ್ಕಾರದಿಂದ ತೆಗೆದುಕೊಂಡು ಹೋಗುವರು. ಅದು ನಿಮಗೆ ಮತ್ತೆ ಸಿಕ್ಕುವುದಿಲ್ಲ. ನಿಮ್ಮ ಕುರಿಗಳು ನಿಮ್ಮ ಶತ್ರುವಿಗೆ ಕೊಡಲಾಗುವುದು. ಅವುಗಳನ್ನು ಬಿಡಿಸುವುದಕ್ಕೆ ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನಿಮ್ಮ ಪಶುಗಳನ್ನು ನಿಮ್ಮ ಕಣ್ಣಮುಂದೆಯೇ ಕೊಯ್ಯುವರು; ಆದರೆ ಅವುಗಳ ಮಾಂಸ ನಿಮಗೆ ಸಿಕ್ಕದು. ನಿಮ್ಮ ಕತ್ತೆಯನ್ನು ನಿಮ್ಮೆದುರಿಗೇ ಬಲಾತ್ಕಾರದಿಂದ ಹಿಡಿದುಕೊಂಡು ಹೋಗುವರು. ಆದರೆ ಅದನ್ನು ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವುವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮೆದುರಾಗಿ ಬಲಾತ್ಕಾರದಿಂದ ಹಿಡಿದುಕೊಂಡುಹೋಗಿ ನಿಮಗೆ ಹಿಂದಕ್ಕೆ ಕೊಡುವದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿಮ್ಮ ದನಗಳನ್ನು ನಿಮ್ಮೆದುರಿನಲ್ಲಿ ಜನರು ಕೊಯ್ಯುವರು. ಆದರೆ ನೀವು ಅದರ ಮಾಂಸವನ್ನು ತಿನ್ನುವುದಿಲ್ಲ. ನಿಮ್ಮ ಕತ್ತೆಗಳನ್ನು ಜನರು ನಿಮ್ಮಿಂದ ತೆಗೆದುಕೊಂಡು ಹೋಗುವರು. ಆದರೆ ಅವುಗಳನ್ನು ಹಿಂದಕ್ಕೆ ಕೊಡರು. ನಿಮ್ಮ ಕುರಿಗಳನ್ನು ವೈರಿಗಳು ಕೊಂಡೊಯ್ಯುವರು. ನಿಮ್ಮನ್ನು ರಕ್ಷಿಸಲು ಯಾರೂ ಬರಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:31
8 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ಆದ್ದರಿಂದ ಯೆಹೋವ ದೇವರು ಅವರನ್ನು ಏಳು ವರ್ಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟರು.


ನೀವು ಮದುವೆಮಾಡಿಕೊಳ್ಳಲು ನಿಶ್ಚಯಿಸಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಗೊಳಿಸುವನು. ಮನೆಯನ್ನು ಕಟ್ಟಿದರೆ, ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟರೆ, ಅದರ ಫಲ ನಿಮಗೆ ದೊರೆಯುವುದಿಲ್ಲ.


ನಿಮ್ಮ ಪುತ್ರಪುತ್ರಿಯರು ಬೇರೆ ಜನರಿಗೆ ವಶಪಡಿಸಿರಲು, ನೀವು ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಇರುವಿರಿ. ಆದರೆ ಅವರನ್ನು ಕಾಪಾಡಲು ನಿಮ್ಮ ಕೈಯಿಂದ ಸಾಧ್ಯವಾಗದೆ ಇರುವುದು.


ಗಾಜದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು, ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿ, ದನ, ಕತ್ತೆಗಳಾದರೂ ಉಳಿಯಗೊಡಿಸಲಿಲ್ಲ.


ಅವನ ಮನೆಯ ಧನಧಾನ್ಯವು ತೊಲಗಿ ಹೋಗುವುದು; ದೇವದಂಡನೆಯ ದಿನದಲ್ಲಿ ಅದು ಪ್ರವಾಹದಿಂದ ಕೊಚ್ಚಿಕೊಂಡು ಹೋಗುವುದು.


ಯೆಹೋವ ದೇವರು ತನ್ನ ಬಲಗೈಯಿಂದಲೂ, ತನ್ನ ಬಲವುಳ್ಳ ತೋಳಿನಿಂದಲೂ ಆಣೆಯಿಟ್ಟು ಹೇಳಿದ್ದೇನೆಂದರೆ: “ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವುದಿಲ್ಲ. ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ವಿದೇಶಿಯರು ಕುಡಿಯುವುದಿಲ್ಲ.


ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. ನಿನ್ನ ದ್ರಾಕ್ಷಿ ಲತೆಗಳನ್ನೂ, ಅಂಜೂರದ ಗಿಡಗಳನ್ನೂ ನುಂಗಿಬಿಡುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು