Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:64 - ಕನ್ನಡ ಸಮಕಾಲಿಕ ಅನುವಾದ

64 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 “ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು; ಅಲ್ಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:64
27 ತಿಳಿವುಗಳ ಹೋಲಿಕೆ  

ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ಆದ್ದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ, ನಿಮಗೂ, ನಿಮ್ಮ ಪಿತೃಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು. ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆ ಮಾಡುವಿರಿ ಮತ್ತು ನಾನು ನಿಮಗೆ ಕನಿಕರ ತೋರಿಸುವುದಿಲ್ಲ.’


“ದಯಮಾಡಿ ನಿಮ್ಮ ಸೇವಕನಾದ ಮೋಶೆಗೆ ಹೇಳಿದ ಈ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಮೋಶೆಯ ಮುಖಾಂತರ, ‘ನೀವು ದ್ರೋಹ ಮಾಡಿದರೆ, ನಾನು ನಿಮ್ಮನ್ನು ಜನಾಂಗಗಳ ನಡುವೆ ಚದರಿಸಿಬಿಡುವೆನು.


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”


ಇಗೋ, ನೀವು ಈ ದಿನ ನನ್ನನ್ನು ಸ್ವದೇಶದಿಂದ ಓಡಿಸುತ್ತಿದ್ದೀರಲ್ಲಾ! ನಿಮ್ಮ ಸಮ್ಮುಖದಿಂದ ನಾನು ಮರೆಯಾಗಿರಬೇಕಾಯಿತು. ಭೂಮಿಯಲ್ಲಿ ಅಲೆಮಾರಿಯಾಗಿರಬೇಕು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು,” ಎಂದನು.


ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿದ ಪೂರ್ವಕಾಲವನ್ನು ವಿಚಾರಿಸಿ ನೋಡಿರಿ. ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ವಿಚಾರಿಸಿರಿ. ಇಂಥ ಅದ್ಭುತಕಾರ್ಯ ಉಂಟಾಯಿತೇ? ಇಲ್ಲವೆ ಇಂಥ ಸುದ್ದಿ ಕೇಳಿದ್ದುಂಟ್ಟೋ?


ಅವರು ತಮಗೆ ನೇಮಕವಾಗದಿದ್ದ ಹಾಗು ಗೊತ್ತಿಲ್ಲದಿದ್ದ ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದ್ದಾರೆ.


ನಾನು ನಿಮ್ಮ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ, ಶಾಪವೂ, ನಿಮಗೆ ಸಂಭವಿಸಿದಾಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಚದರಿಸಿರುವ ಎಲ್ಲಾ ಜನಾಂಗಗಳ ಮಧ್ಯದಲ್ಲಿಯೇ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು.


ನಾನು ಅವರನ್ನು ಚದರಿಸಿಬಿಡುವೆನು. ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು.


ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಕಡಿಯತಕ್ಕ ಕುರಿಗಳಂತೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀರಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀರಿ.


ಯೆಹೋವ ದೇವರಾದ ನಾನು ಮನುಷ್ಯರನ್ನು ದೂರ ಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗಿರುವುದು.


ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”


ನಿನ್ನ ಶತ್ರುಗಳ ಕೈಗೆ ಕೊಟ್ಟು, ನಿನ್ನನ್ನು ಗೊತ್ತಿಲ್ಲದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.


ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ನಾನು ಅವರನ್ನು ಇತರ ಜನಾಂಗಗಳಲ್ಲಿ ಚದರಿಸುತ್ತೇನೆಂದೂ, ದೇಶಗಳಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಅವರ ಮೇಲೆ ಕೈಯೆತ್ತಿ ಪ್ರಮಾಣಮಾಡಿದೆನು.


ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶಗಳಲ್ಲಿ ಚದರಿಹೋದರು. ಅವರ ದುರ್ಮಾರ್ಗ ದುರಾಚಾರಗಳಿಗೆ ಅನುಸಾರವಾಗಿ ಅವರನ್ನು ನ್ಯಾಯತೀರಿಸಿದೆನು.


ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”


ನೀವು ಅವರಿಗೆ ಸಮ್ಮತಿಸಬಾರದು. ಅವರ ಮಾತನ್ನು ಕೇಳಬಾರದು. ನೀವು ಅವರನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.


ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ನಾನು ಇಸ್ರಾಯೇಲರನ್ನು ಎಲ್ಲಾ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ.


“ಚೀಯೋನ್ ಪುತ್ರಿಯೇ, ಹಾಡಿ ಹರ್ಷಿಸು. ಏಕೆಂದರೆ, ನಾನು ಬರುವೆನು ಮತ್ತು ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು