Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:24 - ಕನ್ನಡ ಸಮಕಾಲಿಕ ಅನುವಾದ

24 ಆಗ ಎಲ್ಲಾ ದೇಶದವರೂ, “ಯೆಹೋವ ದೇವರು ಈ ದೇಶಕ್ಕೆ ಏಕೆ ಹೀಗೆ ಮಾಡಿದ್ದಾರೆ? ಈ ದೊಡ್ಡ ಕೋಪಾಗ್ನಿಗೆ ಕಾರಣವೇನು?” ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ‘ಸರ್ವೇಶ್ವರ ಈ ನಾಡಿಗೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣ ಏನಿರಬಹುದು?’ ಎಂದು ವಿಚಾರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು? ಎಂಬದಾಗಿ ವಿಚಾರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಇತರ ದೇಶಗಳವರು, ‘ದೇವರು ಈ ದೇಶವನ್ನು ಯಾಕೆ ನಾಶಮಾಡಿದನು? ಆತನು ಯಾಕೆ ಕೋಪಗೊಂಡನು?’ ಎಂದು ವಿಚಾರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:24
16 ತಿಳಿವುಗಳ ಹೋಲಿಕೆ  

ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಭೂರಾಜರೂ, ವಿರೋಧಿಯೂ, ಶತ್ರುವೂ ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.


“ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಅಣಿಮಾಡಿ, ಗಾದ್ ಎಂಬ ಅದೃಷ್ಟ ದೇವತೆಗೆ ಮದ್ಯವನ್ನು ತುಂಬಾ ಬೆರೆಸಿದ ನಿಮಗೆ


“ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’


“ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ, ‘ಏಕೆ ಯೆಹೋವ ದೇವರು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಮಾತಾಡಿದ್ದಾರೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಮಾಡಿರುವ ಪಾಪವೇನು?’ ಎಂದು ಹೇಳಿದರೆ, ನೀನು ಅವರಿಗೆ ಹೀಗೆ ಹೇಳಬೇಕು:


ಕಾವಲಿನವರ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ, ಅವನಿಗೆ ಹೇಳಿದ್ದೇನೆಂದರೆ, “ನಿನ್ನ ದೇವರಾದ ಯೆಹೋವ ದೇವರು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾರೆ. ಹೇಳಿದ ಪ್ರಕಾರವೇ ಯೆಹೋವ ದೇವರು ಅದನ್ನು ಬರಮಾಡಿದ್ದಾನೆ.


ನಾನು ದೇಶವನ್ನು ಹಾಳುಮಾಡುವೆನು. ಅದರಲ್ಲಿ ವಾಸವಾಗುವ ನಿಮ್ಮ ಶತ್ರುಗಳೂ ಅದಕ್ಕೆ ಆಶ್ಚರ್ಯಪಡುವರು.


ದೇವರ ಕಟ್ಟಳೆಗಳನ್ನೂ, ದೇವರು ತಮ್ಮ ಪಿತೃಗಳ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಅವರಿಗೆ ಹೇಳಿದ ಎಚ್ಚರಿಕೆಯನ್ನೂ ತಿರಸ್ಕರಿಸಿದರು. ಅವರು ವ್ಯರ್ಥವಾದ ವಿಗ್ರಹಗಳನ್ನು ಹಿಂಬಾಲಿಸಿ, ನಿಷ್ಪ್ರಯೋಜಕರಾದರು. “ನೀವು ಅವರ ಹಾಗೆ ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ್ದರೂ, ಅವರು ತಮ್ಮ ಸುತ್ತಲಿನ ಜನರನ್ನೇ ಅನುಸರಿಸಿದರು.


ಏಕೆಂದರೆ ಅವರು ತಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ಅವರ ಒಡಂಬಡಿಕೆಯನ್ನೂ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಸಮಸ್ತವನ್ನೂ ಮೀರಿದರು. ಅವರು ದೇವರ ಆಜ್ಞೆಗಳಿಗೆ ಕಿವಿಗೊಡಲಿಲ್ಲ, ಅವುಗಳಂತೆ ನಡೆಯಲಿಲ್ಲ.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ. ನೀನು ಒಡಂಬಡಿಕೆಯನ್ನು ಮೀರಿ, ನನ್ನ ಆಣೆಯನ್ನು ತಿರಸ್ಕರಿಸಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು