Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:20 - ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ನಿಮಗೆ ವಿಶ್ರಾಂತಿ ಕೊಟ್ಟ ಹಾಗೆಯೇ ನಿಮ್ಮ ಸಹೋದರರಿಗೂ ವಿಶ್ರಾಂತಿಯನ್ನು ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವರು. ಅದುವರೆಗೆ ನೀವು ಅವರೊಂದಿಗೆ ಸೇರಿ ಯುದ್ಧಕ್ಕೆ ಹೋಗಿರಿ. ಅನಂತರ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ನಿಮಗೆ ಕೊಟ್ಟ ಸ್ಥಳಗಳಗೆ ಹಿಂತಿರುಗಿ ಬರಬಹುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವತ್ತಿಗೆ ಹಿಂತಿರುಗಿ ಬರಬಹುದು” ಎಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಸರ್ವೇಶ್ವರನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ನಾನು ಕೊಟ್ಟ ಸೊತ್ತಿಗೆ ತಿರುಗಿ ಬರಬಹುದು’ ಎಂದು ಆಜ್ಞಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವಾಸ್ತ್ಯಕ್ಕೆ ತಿರಿಗಿ ಬರಬಹುದು ಎಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜೋರ್ಡನ್ ನದಿಯ ಮತ್ತೊಂದು ಕಡೆಯಲ್ಲಿರುವ ದೇಶವನ್ನು ಯೆಹೋವನು ನಿಮ್ಮ ಸಂಬಂಧಿಕರಾದ ಇಸ್ರೇಲರಿಗೆ ಕೊಡಲಿದ್ದಾನೆ. ಆ ದೇಶವನ್ನು ಇಸ್ರೇಲರು ತೆಗೆದುಕೊಳ್ಳುವ ತನಕ ನೀವು ಅವರಿಗೆ ಸಹಾಯ ಮಾಡಲೇಬೇಕು. ಇಲ್ಲಿ ಯೆಹೋವನು ನಿಮಗೆ ಶಾಂತಿಯನ್ನು ದಯಪಾಲಿಸಿದಂತೆ ಅಲ್ಲಿಯೂ ದಯಪಾಲಿಸುವ ತನಕ ಅವರಿಗೆ ಸಹಾಯ ಮಾಡಿರಿ. ಬಳಿಕ ನಾನು ನಿಮಗೆ ಕೊಟ್ಟಿರುವ ಈ ದೇಶಕ್ಕೆ ನೀವು ಮರಳಿ ಬರಬಹುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:20
9 ತಿಳಿವುಗಳ ಹೋಲಿಕೆ  

ಈಗ ನಿಮ್ಮ ದೇವರಾದ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದ ಪ್ರಕಾರ, ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟಿದ್ದಾರೆ. ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಕಡೆ ನಿಮಗೆ ಕೊಟ್ಟ ಸೊತ್ತಿನ ದೇಶದಲ್ಲಿರುವ ನಿಮ್ಮ ನಿವಾಸಗಳಿಗೆ ನೀವು ಹೊರಡಿರಿ.


“ನೀವು ಬಹು ಆಸ್ತಿಯುಳ್ಳವರಾಗಿ ಪಶುಗಳು, ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂದಿರುಗಿ, ನಿಮ್ಮ ಗುಡಾರಗಳಿಗೆ ಹೋಗಿರಿ. ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ,” ಎಂದನು.


ದೇಶವು ಯೆಹೋವ ದೇವರ ಮುಂದೆ ವಶವಾದ ತರುವಾಯ, ನೀವು ಯೆಹೋವ ದೇವರ ಮತ್ತು ಇಸ್ರಾಯೇಲರ ದೃಷಿಯಲ್ಲಿ ನಿರಪರಾಧಿಗಳಾಗಿದ್ದು, ಈ ದೇಶವು ಯೆಹೋವ ದೇವರ ಮುಂದೆ ನಿಮ್ಮ ಸೊತ್ತಾಗುವುದು.


ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾಪಿಸಿ, “ನಿಮ್ಮ ದೇವರಾದ ಯೆಹೋವ ದೇವರು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣುಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳನ್ನೂ ಯೆಹೋವ ದೇವರು ಹಾಗೆಯೇ ಮಾಡುವರು.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ವಿಶ್ರಾಂತಿಗೂ, ಸೊತ್ತಿಗೂ ನೀವು ಇನ್ನೂ ಸೇರಲಿಲ್ಲ.


ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.


ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಸೊತ್ತನ್ನು ಹೊಂದಿಕೊಳ್ಳುವವರೆಗೆ, ನಾವು ನಮ್ಮ ಮನೆಗಳಿಗೆ ತಿರುಗುವುದಿಲ್ಲ.


“ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಗೊಂಡು, ನಾನು ನಿಮಗೆ ಆಜ್ಞಾಪಿಸಿದ ಎಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾಗಿದ್ದೀರಿ.


ರೂಬೇನನ ಗೋತ್ರದವರು, ಗಾದ್ಯ ಗೋತ್ರದವರು, ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು, ಯೆಹೋವ ದೇವರು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ತಾವು ವಶಮಾಡಿಕೊಂಡ ತಮ್ಮ ಗಿಲ್ಯಾದ್ ನಾಡಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು