ಧರ್ಮೋಪದೇಶಕಾಂಡ 3:20 - ಕನ್ನಡ ಸಮಕಾಲಿಕ ಅನುವಾದ20 ಯೆಹೋವ ದೇವರು ನಿಮಗೆ ವಿಶ್ರಾಂತಿ ಕೊಟ್ಟ ಹಾಗೆಯೇ ನಿಮ್ಮ ಸಹೋದರರಿಗೂ ವಿಶ್ರಾಂತಿಯನ್ನು ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವರು. ಅದುವರೆಗೆ ನೀವು ಅವರೊಂದಿಗೆ ಸೇರಿ ಯುದ್ಧಕ್ಕೆ ಹೋಗಿರಿ. ಅನಂತರ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ನಿಮಗೆ ಕೊಟ್ಟ ಸ್ಥಳಗಳಗೆ ಹಿಂತಿರುಗಿ ಬರಬಹುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವತ್ತಿಗೆ ಹಿಂತಿರುಗಿ ಬರಬಹುದು” ಎಂದು ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಸರ್ವೇಶ್ವರನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ನಾನು ಕೊಟ್ಟ ಸೊತ್ತಿಗೆ ತಿರುಗಿ ಬರಬಹುದು’ ಎಂದು ಆಜ್ಞಾಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವಾಸ್ತ್ಯಕ್ಕೆ ತಿರಿಗಿ ಬರಬಹುದು ಎಂದು ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜೋರ್ಡನ್ ನದಿಯ ಮತ್ತೊಂದು ಕಡೆಯಲ್ಲಿರುವ ದೇಶವನ್ನು ಯೆಹೋವನು ನಿಮ್ಮ ಸಂಬಂಧಿಕರಾದ ಇಸ್ರೇಲರಿಗೆ ಕೊಡಲಿದ್ದಾನೆ. ಆ ದೇಶವನ್ನು ಇಸ್ರೇಲರು ತೆಗೆದುಕೊಳ್ಳುವ ತನಕ ನೀವು ಅವರಿಗೆ ಸಹಾಯ ಮಾಡಲೇಬೇಕು. ಇಲ್ಲಿ ಯೆಹೋವನು ನಿಮಗೆ ಶಾಂತಿಯನ್ನು ದಯಪಾಲಿಸಿದಂತೆ ಅಲ್ಲಿಯೂ ದಯಪಾಲಿಸುವ ತನಕ ಅವರಿಗೆ ಸಹಾಯ ಮಾಡಿರಿ. ಬಳಿಕ ನಾನು ನಿಮಗೆ ಕೊಟ್ಟಿರುವ ಈ ದೇಶಕ್ಕೆ ನೀವು ಮರಳಿ ಬರಬಹುದು.’ ಅಧ್ಯಾಯವನ್ನು ನೋಡಿ |
ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.