Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:21 - ಕನ್ನಡ ಸಮಕಾಲಿಕ ಅನುವಾದ

21 ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾಪಿಸಿ, “ನಿಮ್ಮ ದೇವರಾದ ಯೆಹೋವ ದೇವರು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣುಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳನ್ನೂ ಯೆಹೋವ ದೇವರು ಹಾಗೆಯೇ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಕಾಲದಲ್ಲಿ ನಾನು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಆ ಕಾಲದಲ್ಲಿ ನಾನು ಯೆಹೋಶುವನಿಗೆ, ‘ನಿಮ್ಮ ದೇವರಾದ ಸರ್ವೇಶ್ವರ ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನೇ ನೋಡಿರುವೆ. ನೀನು ನದಿ ದಾಟಿಹೋಗುವ ಎಲ್ಲ ರಾಜ್ಯಗಳನ್ನೂ ಅವರು ಹಾಗೆಯೇ ನಾಶಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಕಾಲದಲ್ಲಿ ನಾನು ಯೆಹೋಶುವನಿಗೆ - ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ಹೊಳೇ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆಗ ನಾನು ಯೆಹೋಶುವನಿಗೆ, ‘ಈ ಇಬ್ಬರು ಅರಸರಿಗೆ ಯೆಹೋವನು ಮಾಡಿದ್ದನ್ನು ಕಣ್ಣಾರೆ ನೋಡಿರುವೆ. ಆತನು ಅದೇ ಪ್ರಕಾರ ನೀವು ಈಗ ಪ್ರವೇಶಿಸುವ ದೇಶಗಳಿಗೂ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:21
11 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ


ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.


ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.


ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.


ಆಗ ಯೆಹೋಶುವನು ಅವರಿಗೆ, “ಭಯಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರಿ. ಏಕೆಂದರೆ ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಯೆಹೋವ ದೇವರು ಹೀಗೆಯೇ ಮಾಡುವರು,” ಎಂದನು.


ಯೆಹೋವ ದೇವರು ನಿಮಗೆ ವಿಶ್ರಾಂತಿ ಕೊಟ್ಟ ಹಾಗೆಯೇ ನಿಮ್ಮ ಸಹೋದರರಿಗೂ ವಿಶ್ರಾಂತಿಯನ್ನು ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವರು. ಅದುವರೆಗೆ ನೀವು ಅವರೊಂದಿಗೆ ಸೇರಿ ಯುದ್ಧಕ್ಕೆ ಹೋಗಿರಿ. ಅನಂತರ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ನಿಮಗೆ ಕೊಟ್ಟ ಸ್ಥಳಗಳಗೆ ಹಿಂತಿರುಗಿ ಬರಬಹುದು.”


ನೀವು ಅವುಗಳಿಗೆ ಭಯಪಡಬೇಡಿರಿ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೋಸ್ಕರ ಯುದ್ಧಮಾಡುವರು,” ಎಂದೆನು.


ಕಣ್ಣಾರೆ ನೋಡಿದ ದೊಡ್ಡ ಉಪದ್ರವಗಳನ್ನೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ, ಅದ್ಭುತಗಳನ್ನೂ, ದೇವರ ಬಲವಾದ ಹಸ್ತವನ್ನೂ, ಚಾಚಿದ ತೋಳನ್ನೂ ನೀವು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀವು ಯಾವ ಜನರಿಗೆ ಭಯಪಡುತ್ತೀರೋ, ಆ ಜನರಿಗೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ಹಾಗೆಯೇ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು