Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:13 - ಕನ್ನಡ ಸಮಕಾಲಿಕ ಅನುವಾದ

13 “ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಸಮುದ್ರವನ್ನು ದಾಟಿ, ನಮಗೆ ತೆಗೆದುಕೊಂಡು ಬಂದು ಅದನ್ನು ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಸಮುದ್ರದ ಆಚೆಯಲ್ಲಿ ಇರುವಂಥದ್ದೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದು ಸಮುದ್ರದ ಆಚೆ ಇರುವ ಮಾತಲ್ಲ; ‘ನಮಗಾಗಿ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತು ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು ಅಂದುಕೊಳ್ಳುವದಕ್ಕೆ ಆಸ್ಪದವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇದು ಸಮುದ್ರದ ಆಚೆ ಇರುವ ಮಾತಲ್ಲ, ‘ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವವರು ಯಾರಿರುವರು? ನಾವದನ್ನು ಕೇಳಿ ಅದರಂತೆ ನಡೆಯಬಹುದಾಗಿತ್ತು’ ಎಂದು ಹೇಳುವ ಅವಶ್ಯಕತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:13
13 ತಿಳಿವುಗಳ ಹೋಲಿಕೆ  

ಆ ರಾತ್ರಿಯಲ್ಲಿ ಪೌಲನಿಗೆ ಒಂದು ದರ್ಶನವಾಯಿತು. ಅದರಲ್ಲಿ ಮಕೆದೋನ್ಯದವನೊಬ್ಬನು ನಿಂತುಕೊಂಡು, “ಮಕೆದೋನ್ಯ ದಾಟಿ ಬಂದು ನಮಗೆ ಸಹಾಯಮಾಡು,” ಎಂದು ಅವನನ್ನು ಬೇಡಿಕೊಂಡನು.


ಆದ್ದರಿಂದ ನಾನು ನಿನ್ನನ್ನು ಕೂಡಲೇ ಕರೆದುಕೊಂಡು ಬರಲು ಕೆಲವರನ್ನು ಕಳುಹಿಸಿದೆ. ನೀನು ಬಂದಿರುವುದು ಒಳ್ಳೆಯದೇ ಆಯಿತು. ಕರ್ತ ಯೇಸು ನಮಗೆ ಏನು ಹೇಳಬೇಕೆಂದು ನಿನಗೆ ಆಜ್ಞಾಪಿಸಿರುವರೋ ಅದೆಲ್ಲವನ್ನು ಕೇಳಲು ಈಗ ನಾವು ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.


ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.


ಏಕೆಂದರೆ ಮಾಣಿಕ್ಯಗಳಿಗಿಂತ ಜ್ಞಾನವು ಅಮೂಲ್ಯವಾದದ್ದು. ಅಪೇಕ್ಷಿಸತಕ್ಕ ಯಾವ ವಸ್ತುಗಳನ್ನು ಅದಕ್ಕೆ ಹೋಲಿಸಲಾಗದು.


“ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಆಕಾಶಕ್ಕೆ ಏರಿಹೋಗಿ, ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಆಕಾಶದಲ್ಲಿ ಇರುವಂಥದ್ದೂ ಅಲ್ಲ.


ಆ ವಾಕ್ಯವು ನಿಮಗೆ ಬಹಳ ಸಮೀಪವಾಗಿದೆ. ಅದನ್ನು ಕೈಗೊಳ್ಳುವ ಹಾಗೆ ವಾಕ್ಯವು ನಿಮ್ಮ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು