Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:18 - ಕನ್ನಡ ಸಮಕಾಲಿಕ ಅನುವಾದ

18 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಬಾಳದೆ, ನಾಶವಾಗಿಹೋಗುವಿರಿ ಎಂದು ಈ ಹೊತ್ತು ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇತರ ದೇವರುಗಳನ್ನು ಪೂಜಿಸಿ ಅವಲಂಭಿಸಿದರೆ ನೀವು ಸ್ವಾಧೀನಮಾಡಿಕೊಳ್ಳಲು ಜೋರ್ಡನ್ ನದಿಯನ್ನು ದಾಟಿಹೋಗುವ ನಾಡಿನಲ್ಲಿ ಬಹುಕಾಲ ಇರದೆ ನಾಶ ಆಗಿ ಹೋಗುವಿರಿ. ಇದನ್ನು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನ್ ಹೊಳೆಯನ್ನು ದಾಟಿಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ನಾಶವಾಗುವಿರಿ. ನಿಮ್ಮನ್ನು ನಾನು ಎಚ್ಚರಿಸುತ್ತಿದ್ದೇನೆ. ನೀವು ಯೆಹೋವನಿಗೆ ವಿಮುಖರಾದರೆ, ನಿಮಗಾಗಿ ತೆಗೆದುಕೊಳ್ಳಲು ನೀವು ಪ್ರವೇಶಿಸುತ್ತಿರುವ ಜೋರ್ಡನ್ ನದಿಯ ಆಚೆ ದಡದಲ್ಲಿರುವ ದೇಶದಲ್ಲಿ ನೀವು ಬಹುಕಾಲದವರೆಗೆ ಜೀವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:18
10 ತಿಳಿವುಗಳ ಹೋಲಿಕೆ  

ನಾನು ಈ ದಿನ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆದು, ನಿಮಗೆ ಹೇಳುವುದೇನೆಂದರೆ, ನೀವು ಯೊರ್ದನನ್ನು ದಾಟಿ ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ, ಸಂಪೂರ್ಣವಾಗಿ ನಶಿಸುವಿರಿ.


ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು.


ಏಕೆಂದರೆ ನೀವು ದೇವರ ಕಡೆಯಿಂದ ತೊಲಗಿದರೆ, ದೇವರು ಅವರನ್ನು ಮರುಭೂಮಿಯಲ್ಲಿಯೇ ಇರಿಸಿಬಿಡುವನು. ನೀವು ಈ ಸಮಸ್ತ ಜನರ ನಾಶಕ್ಕೆ ನೀವೇ ಕಾರಣರಾಗುವಿರಿ,” ಎಂದು ಹೇಳಿದನು.


ಆದರೆ ನಿಮ್ಮ ಹೃದಯವು ತಿರುಗಿಬಿದ್ದು ನೀವು ಮಾತು ಕೇಳದೆ ಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆದವರಾಗಿ ಅಡ್ಡಬಿದ್ದು, ಅವುಗಳಿಗೆ ಸೇವೆ ಮಾಡಿದರೆ,


ನಿಮ್ಮಿಂದ ಮಕ್ಕಳೂ, ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು, ತರುವಾಯ ಯಾವುದಾದರೂ ಕೆತ್ತಿದ ವಿಗ್ರಹವನ್ನು ಮಾಡಿ ನಿಮ್ಮನ್ನು ಕೆಡಿಸಿಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಅವರಿಗೆ ಕೋಪಗೊಳಿಸಿದರೆ,


ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.


ಬಹಳ ಕೇಡುಗಳೂ ವಿಪತ್ತುಗಳೂ ಅವರಿಗೆ ಸಂಭವಿಸುವಾಗ, ಈ ಹಾಡು ಅವರಿಗೆ ವಿರೋಧ ಸಾಕ್ಷಿಯಾಗಿ ಉತ್ತರಕೊಡುವುದು. ಏಕೆಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತು ಹೋಗುವುದಿಲ್ಲ. ನಾನು ಪ್ರಮಾಣ ಮಾಡಿದ ದೇಶದಲ್ಲಿ ಅವರನ್ನು ತರುವುದಕ್ಕಿಂತ ಮುಂಚೆ ಅವರು ಈ ಹೊತ್ತು ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು