Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:20 - ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾತನ್ನು ಕೇಳಿ, ಅವರನ್ನೇ ಹೊಂದಿಕೊಂಡಿರಿ. ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಲ್ಲಿ ನೀವು ಬಹುಕಾಲ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾತಿಗೆ ವಿಧೇಯರಾಗಿರ್ರಿ, ಆತನನ್ನು ಹೊಂದಿಕೊಂಡೇ ಇರ್ರಿ. ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವದಕ್ಕೂ ಬಹುಕಾಲ ಇರುವದಕ್ಕೂ ಆತನೇ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:20
39 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು.


ದೇವರಿಗೆ ಏನಾದರೂ ಅವಶ್ಯಕತೆಯಿರುವಂತೆ ಮಾನವ ಹಸ್ತಗಳ ಸೇವೆಯು ಅಗತ್ಯವಿರುವುದಿಲ್ಲ. ದೇವರೇ ಎಲ್ಲರಿಗೂ ಜೀವವನ್ನೂ ಉಸಿರನ್ನೂ ಪ್ರತಿಯೊಂದನ್ನೂ ದಯಪಾಲಿಸಿರುವುದರಿಂದ,


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ದೇವರಲ್ಲಿಯೇ.’ ನಿಮ್ಮ ಕವಿಗಳಲ್ಲಿ ಕೆಲವರು ಹೇಳಿರುವಂತೆ, ‘ನಾವು ನಿಜಕ್ಕೂ ದೇವರ ಮಕ್ಕಳೇ ಆಗಿದ್ದೇವೆ.’


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ದೇವರು ನಮ್ಮ ಜೀವನವನ್ನು ಕಾಪಾಡಿ, ನಮ್ಮ ಕಾಲು ಎಡವದಂತೆ ಮಾಡಿದ್ದಾರೆ.


ಏಕೆಂದರೆ ನಿಮ್ಮ ಬಳಿಯಲ್ಲಿ ಜೀವದ ಬುಗ್ಗೆ ಉಂಟು; ನಿಮ್ಮ ಬೆಳಕಿನಲ್ಲಿ ನಾವು ಬೆಳಕನ್ನು ಕಾಣುವೆವು.


ಆದರೆ, ಈವರೆಗೂ ಹೇಗೋ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿರಿ.


ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ.


ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು.


ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ.


ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ. ನಾನು ಯಾರಿಗೂ ಭಯಪಡೆನು? ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ. ನಾನು ಯಾರಿಗೂ ಹೆದರೆನು?


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ಯೆಹೋವ ದೇವರು ನಿಮ್ಮ ಪಿತೃಗಳಿಗೂ, ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಆದರೆ ನಿಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾದ ನೀವೆಲ್ಲರು ಇಂದಿನವರೆಗೆ ಬದುಕಿದ್ದೀರಿ.


ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ನಡೆದುಕೊಂಡು, ಅವರ ಆಜ್ಞಾತೀರ್ಪುಗಳನ್ನೂ, ಅನುಸರಿಸಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ. ಹಾಗೆ ಮಾಡಿದರೆ, ನೀವು ಬದುಕಿ ಹೆಚ್ಚುವಿರಿ. ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.


ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಅವರ ಕೋಪವು ಕ್ಷಣಮಾತ್ರವೇ; ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; ರಾತ್ರಿಯಲ್ಲಿ ದುಃಖ ಬಂದಿದ್ದರೂ; ಬೆಳಿಗ್ಗೆ ಆನಂದವು ಬರುವುದು.


ಆದರೆ ನೀವು ಯೊರ್ದನ್ ನದಿಯನ್ನು ದಾಟಿದ ಮೇಲೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ, ದೇವರು ಸುತ್ತಲಿರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡುವರು.


ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಎಚ್ಚರಿಕೆಯಿಂದ ಕಾಪಾಡಿ, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರನ್ನು ಅಂಟಿಕೊಂಡರೆ,


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.


ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು.


ಆಗ ಮೋಶೆ ಹೋಗಿ ಇಸ್ರಾಯೇಲರಿಗೆಲ್ಲಾ ಈ ಮಾತುಗಳನ್ನು ಹೇಳಿದನು:


ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು.


ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.


ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ನೀವೂ, ನಿಮ್ಮ ಮಕ್ಕಳೂ, ನಿಮ್ಮ ಮೊಮ್ಮಕ್ಕಳೂ ತಮ್ಮ ಜೀವನದ ದಿವಸಗಳಲ್ಲೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಕೈಗೊಳ್ಳುವ ಹಾಗೆಯೂ, ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಾನು ನಿಮಗೆ ಕೊಡುವ ದೇವರ ಎಲ್ಲಾ ತೀರ್ಪುಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಬೇಕು.


ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವ ದೇವರನ್ನೇ ಪ್ರೀತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು