Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:23 - ಕನ್ನಡ ಸಮಕಾಲಿಕ ಅನುವಾದ

23 ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ - ನಾನು ಇಸ್ರಾಯೇಲ್ಯರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ: “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:23
15 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.


ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು.


ಆದರೆ ಯೆಹೋಶುವನಿಗೆ ಆಜ್ಞಾಪಿಸಿ, ಅವನಿಗೆ ದೃಢಮಾಡಿ ಬಲಪಡಿಸು. ಅವನು ಈ ಜನರ ಮುಂದೆ ದಾಟಿ ಹೋಗಿ, ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು,” ಎಂದು ಹೇಳಿದರು.


ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುವರು. ಅವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸೋಲಿಸುವರು. ನೀವು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋಶುವನು ನಿಮ್ಮ ಮುಂದೆ ಹೋಗುವನು.


ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಆ ಭೂಮಿಯು ಎಂಥಾದ್ದೋ? ಸಾರವಾದದ್ದೋ? ನಿಸ್ಸಾರವಾದದ್ದೋ? ಮರಗಳುಳ್ಳದ್ದೋ? ಇಲ್ಲದಿರುವುದೋ? ಎಂದು ನೋಡಿರಿ. ನೀವು ಧೈರ್ಯವುಳ್ಳವರಾಗಿದ್ದು, ಆ ಭೂಮಿಯ ಫಲವನ್ನು ತರಬೇಕು,” ಎಂದನು. ಆ ಕಾಲವು ಪ್ರಥಮ ದ್ರಾಕ್ಷಿ ಹಣ್ಣುಗಳ ಕಾಲವಾಗಿತ್ತು.


“ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.


ಅವನ ಮೇಲೆ ತನ್ನ ಕೈಗಳನ್ನು ಇಟ್ಟು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.


ಇದಲ್ಲದೆ ಮೋಶೆ ಈ ನಿಯಮದ ವಾಕ್ಯಗಳನ್ನು ಗ್ರಂಥದಲ್ಲಿ ಬರೆದು ತೀರಿಸಿದಾಗ,


“ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು.


ಆದರೂ ಈಗ ಯೆಹೋವ ದೇವರು ಹೀಗೆ ಹೇಳಿದರು: ‘ಜೆರುಬ್ಬಾಬೆಲನೇ, ಬಲವಾಗಿರು. ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನೇ, ಬಲವಾಗಿರು. ದೇಶದ ಜನರೆಲ್ಲರೇ, ಬಲವಾಗಿರಿ,’ ಕೆಲಸಮಾಡಿರಿ. ‘ನಾನು ನಿಮ್ಮ ಸಂಗಡ ಇದ್ದೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಶಕ್ತಿಶಾಲಿಗಳಾಗಿರಿ, ಧೈರ್ಯವಾಗಿರಿ, ಭಯಪಡಬೇಡಿರಿ, ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ನಿಮ್ಮನ್ನು ಕೈಬಿಡುವುದಿಲ್ಲ, ತೊರೆಯುವುದೂ ಇಲ್ಲ.”


ಅವನ ಮಗನು ನೂನನು, ಅವನ ಮಗನು ಯೆಹೋಶುವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು