Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:27 - ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:27
18 ತಿಳಿವುಗಳ ಹೋಲಿಕೆ  

ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, ಅವರ ಅಂತ್ಯವು ಏನೆಂದು ನೋಡುವೆನು. ಅವರು ಮೂರ್ಖ ಸಂತತಿಯೇ. ನಂಬಿಕೆಯಿಲ್ಲದ ಮಕ್ಕಳೇ.


ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದೀರಿ.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಏಕೆಂದರೆ ನೀನು ಹಟಗಾರ. ನಿನ್ನ ಕತ್ತಿನ ನರಗಳು ಕಬ್ಬಿಣ, ನಿನ್ನ ಹಣೆ ಕಂಚಿನದು ಎಂದು ನಾನು ತಿಳಿದುಕೊಂಡಿದ್ದೇನೆ.


ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.


ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.


ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ತೆಗೆದುಹಾಕಿದಾಗ, “ಯೆಹೋವ ದೇವರು ನಮ್ಮನ್ನು ಈ ದೇಶವನ್ನು ಸ್ವಾಧೀನಪಡಿಸಲು ಕರೆದುಕೊಂಡು ಬಂದಿದ್ದು ನಮ್ಮ ನೀತಿಯ ನಿಮಿತ್ತವೇ,” ಎಂದು ನೀವು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳಬಾರದು. ಆ ಜನಾಂಗಗಳ ಕೆಟ್ಟತನದ ನಿಮಿತ್ತವೇ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ಇದಲ್ಲದೆ ಯೆಹೋವ ದೇವರು ನನಗೆ, “ನಾನು ಈ ಜನರನ್ನು ನೋಡಿದ್ದೇನೆ. ಇಗೋ, ಇದು ಆಜ್ಞೆಗೆ ವಿಧೇಯವಾಗದ ಜನಾಂಗವೇ.


“ದೇವರ ನಿಯಮದ ಈ ಗ್ರಂಥವನ್ನು ತೆಗೆದುಕೊಂಡು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿ ಇಡಿರಿ. ಅದು ನಿಮಗೆ ವಿರೋಧವಾದ ಸಾಕ್ಷಿಯಾಗಿ ಅಲ್ಲಿ ಇರಲಿ.


“ಆದರೆ ನಮ್ಮ ಪಿತೃಗಳು ಗರ್ವಪಟ್ಟು ನಡೆದು, ಹಟಮಾರಿಗಳೂ, ಕಠಿಣರೂ ಆಗಿ ನಿಮ್ಮ ಆಜ್ಞೆಗಳಿಗೆ ಅವಿಧೇಯರಾದರು.


ನೀವು ಯೆಹೋವ ದೇವರ ಮಾತಿಗೆ ವಿಧೇಯರಾಗದಿದ್ದರೆ, ಯೆಹೋವ ದೇವರ ಆಜ್ಞೆಗೆ ವಿರೋಧವಾಗಿ ತಿರುಗಿಬಿದ್ದರೆ, ಯೆಹೋವ ದೇವರ ಹಸ್ತವು ನಿಮ್ಮ ಪಿತೃಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿರುವುದು.


“ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು.


ಆದರೆ ಜನರು ಇನ್ನೂ ದೇವರಿಗೆ ವಿರೋಧವಾಗಿ ಪಾಪಮಾಡಿ, ಮರುಭೂಮಿಯಲ್ಲಿ ಮಹೋನ್ನತರಿಗೆ ವಿರೋಧವಾಗಿ ಕೋಪವನ್ನೆಬ್ಬಿಸಿದರು.


ಏನೆಂದರೆ ಇವರು ತಿರುಗಿಬೀಳುವ ಜನರೇ. ಸುಳ್ಳಾಡುವ ಮಕ್ಕಳು. ಯೆಹೋವ ದೇವರ ಉಪದೇಶಕ್ಕೆ ಕಿವಿಗೊಡದ ಮಕ್ಕಳೇ.


ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು. ಅವರು ತಿರುಗಿಬಿದ್ದು ಹೋಗಿಬಿಟ್ಟಿದ್ದಾರೆ.


“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು