Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:29 - ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:29
28 ತಿಳಿವುಗಳ ಹೋಲಿಕೆ  

ಆ ನ್ಯಾಯಾಧಿಪತಿಯ ಮರಣದ ನಂತರ, ಅವರು ತಿರುಗಿ ಮಾರ್ಗತಪ್ಪಿ, ಅನ್ಯದೇವರುಗಳನ್ನು ಹಿಂಬಾಲಿಸಿ ಹೋಗಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಹಿರಿಯರಿಗಿಂತ ಅಧಿಕ ಭ್ರಷ್ಟರಾದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಟಮಾರಿತನವನ್ನೂ ಬಿಡಲೇ ಇಲ್ಲ.


ಇಸ್ರಾಯೇಲರು ತಮ್ಮನ್ನು ಕೆಡಿಸಿಕೊಂಡರು. ದೇವರ ಮಕ್ಕಳಿಗೆ ತಕ್ಕಂತೆ ನಡೆಯದವರು. ಅವರು ಮೂರ್ಖರಾದ ವಕ್ರ ಸಂತತಿ.


ಗಿಬೆಯದ ದಿವಸಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ. ಆದ್ದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕ ಮಾಡಿಕೊಳ್ಳುವನು. ಅವರ ಪಾಪಕ್ಕೆ ತನ್ನ ದಂಡನೆಯನ್ನು ವಿಧಿಸುವನು.


ಆಗ ಯಾಕೋಬನು ತನ್ನ ಪುತ್ರರನ್ನು ಕರೆಯಿಸಿ ಅವರಿಗೆ, “ನೀವೆಲ್ಲರೂ ಕೂಡಿಬನ್ನಿರಿ. ಅಂತ್ಯ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.


ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು,


ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ.


ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.


ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.


ನನ್ನ ವಿಮೋಚಕರು ಜೀವಿಸುತ್ತಿದ್ದಾರೆ ಎಂದು ತಿಳಿದಿದ್ದೇನೆ. ಕಡೆಯ ದಿನದಲ್ಲಿ ಭೂಮಿಯ ಮೇಲೆ ನನ್ನ ವಿಮೋಚಕರು ಬಂದು ನಿಲ್ಲುವರೆಂದೂ ತಿಳಿದಿದ್ದೇನೆ.


‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.


ನೀವು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿಮಗೆ ಸಂಭವಿಸಿದಾಗ, ಕಡೇ ದಿವಸಗಳಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು ವಿಧೇಯರಾಗಿರಿ.


ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು.


ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳಬೇಡಿರಿ. ಎಂದರೆ, ಸ್ತ್ರೀಪುರುಷರ ರೂಪದಲ್ಲಾಗಲಿ,


ಆಗ ಮೋಶೆ ಇಸ್ರಾಯೇಲ್ ಸಮೂಹಕ್ಕೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಪ್ರಾರಂಭದಿಂದ ಕೊನೆಯವರೆಗೆ ಹೇಳಿದನು.


ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, ಅವರ ಅಂತ್ಯವು ಏನೆಂದು ನೋಡುವೆನು. ಅವರು ಮೂರ್ಖ ಸಂತತಿಯೇ. ನಂಬಿಕೆಯಿಲ್ಲದ ಮಕ್ಕಳೇ.


ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.


ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು.


ಆಗ ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗು ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು