Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:22 - ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:22
42 ತಿಳಿವುಗಳ ಹೋಲಿಕೆ  

ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.


ನಿನ್ನ ಶತ್ರುಗಳ ಕೈಗೆ ಕೊಟ್ಟು, ನಿನ್ನನ್ನು ಗೊತ್ತಿಲ್ಲದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.


ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.


ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ರಭಸವಾಗಿ ಹರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವುವು; ತಗ್ಗುಗಳು ಸೀಳುವುವು.


ಆಗ ನಿನ್ನ ದೋಷದಿಂದಲೇ ನೀನು ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. ನಿನಗೆ ತಿಳಿಯದ ದೇಶದಲ್ಲಿ ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.”


ನಿಮ್ಮ ಪ್ರೀತಿಯು ನನ್ನ ಮೇಲೆ ಅಗಾಧವಾಗಿದೆ. ಕೆಳಗಿನ ಪಾತಾಳದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀರಿ.


ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


“ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?


ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ನೀವು ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು.


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ಬೆಟ್ಟಗಳು ನಿನ್ನನ್ನು ಕಂಡು ನಡುಗಿದವು; ಜಲಪ್ರವಾಹವು ಹಾದುಹೋಯಿತು; ಸಾಗರವು ಗರ್ಜಿಸಿ; ತನ್ನ ತೆರೆಗಳನ್ನು ಮೇಲಕ್ಕೆ ಎತ್ತುತ್ತದೆ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’


ಅವರು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಮುರಿದು ಹಾಕಿದ್ದಾರೆ. ಅವರು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾರೆ. ತನ್ನ ಸುತ್ತಲೂ ಇರುವವರನ್ನು ದಹಿಸುವ ಬೆಂಕಿಯಂತೆ, ಅವರು ಯಾಕೋಬನಿಗೆ ವಿರುದ್ಧವಾಗಿ ದಹಿಸಿಬಿಟ್ಟಿದ್ದಾರೆ.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ, ಬೆಟ್ಟಗಳು ಕದಲಿ ಹೋದರೂ, ನನ್ನ ಕುಂದದ ಪ್ರೀತಿಯು ನಿನ್ನನ್ನು ಬಿಟ್ಟು ಹೋಗದು, ನನ್ನ ಸಮಾಧಾನದ ಒಡಂಬಡಿಕೆಯು ನಿನ್ನನ್ನು ಬಿಟ್ಟು ಕದಲದು,” ಎಂದು ನಿನ್ನನ್ನು ಕರುಣಿಸುವ ಯೆಹೋವ ದೇವರು ಹೇಳುತ್ತಾರೆ.


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ. ಅದರಲ್ಲಿ ವಾಸವಾಗಿರುವವರು ದಂಡನೆಗೆ ಒಳಗಾಗಿದ್ದಾರೆ. ಆದ್ದರಿಂದ ಭೂನಿವಾಸಿಗಳು ಸುಟ್ಟು ಹೋಗಿ, ಕೆಲವರು ಮಾತ್ರ ಉಳಿದಿದ್ದಾರೆ.


ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ; ಬೆಟ್ಟಗಳನ್ನು ಮುಟ್ಟಿರಿ, ಆಗ ಅವುಗಳಿಂದ ಹೊಗೆ ಹೊರಹೊಮ್ಮುವುದು.


ಬೆಂಕಿಯು ಅವರ ಮುಂದೆ ಹೋಗಿ ಅವರ ವೈರಿಗಳನ್ನು ಸುತ್ತಲೂ ದಹಿಸುವುದು.


ಅಡವಿ ಸುಡುವ ಬೆಂಕಿಯ ಹಾಗೆಯೂ, ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ


ಆದ್ದರಿಂದ ಭೂಮಿಯು ಕಂಪಿಸಿದರೂ ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ,


ನೀವು ಬರುವ ಕಾಲದಲ್ಲಿ ಅವರನ್ನು ಅಗ್ನಿಕುಂಡದಂತೆ ದಹಿಸಿಬಿಡುವಿರಿ. ಯೆಹೋವ ದೇವರು ತಮ್ಮ ಬೇಸರದಿಂದ ಅವರನ್ನು ದಂಡಿಸಿಬಿಡುವರು; ಬೆಂಕಿಯು ಅವರನ್ನು ಭಸ್ಮ ಮಾಡುವುದು.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ.


ಅವರು ತಮಗೆ ಸಂಬಂಧಪಟ್ಟವುಗಳೆಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು. ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.


ಏಕೆಂದರೆ ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನದಂದು ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗುವುದು.


ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಸಾರ್ವಭೌಮ ಯೆಹೋವ ದೇವರು ಬೆಂಕಿಯಿಂದ ನ್ಯಾಯತೀರ್ಪು ಮಾಡುವುದಕ್ಕೆ ಕರೆದರು. ಅದು ದೊಡ್ಡ ಅಗಾಧವನ್ನು ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.


ಕರ್ತದೇವರು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾರೆ. ಯೆಹೂದದ ಪುತ್ರಿಯ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿ ಹಾಕಿದ್ದಾರೆ. ಅವರು ಅವುಗಳನ್ನು ನೆಲಸಮ ಮಾಡಿದ್ದಾರೆ. ಅವರು ಆಕೆಯ ರಾಜ್ಯವನ್ನೂ, ಪ್ರಭುಗಳನ್ನೂ ಅಗೌರವಿಸಿ ನೆಲಕ್ಕೆ ದಬ್ಬಿದ್ದಾರೆ.


ಅವರು ಶತ್ರುವಿನ ಹಾಗೆಯೇ ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ. ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು, ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾರೆ. ಅವರು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಪುತ್ರಿಯ ಡೇರೆಯಲ್ಲಿ ಸುರಿದಿದ್ದಾರೆ.


ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.


ನಾನು ನಿಮ್ಮನ್ನು ಕೂಡಿಸಿ, ನನ್ನ ರೋಷದ ಬೆಂಕಿಯನ್ನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿಹೋಗುವಿರಿ.


ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು