Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:24 - ಕನ್ನಡ ಸಮಕಾಲಿಕ ಅನುವಾದ

24 ಅವರು ಹಸಿವೆಯಿಂದ ಬಳಲಿ ಹೋಗುವರು, ಜ್ವಾಲೆಯಿಂದಲೂ ಕಠಿಣ ವ್ಯಾಧಿಯಿಂದಲೂ ಬೀಳುವರು. ಕಾಡುಮೃಗಗಳನ್ನೂ ಧೂಳಿನಲ್ಲಿರುವ ವಿಷಸರ್ಪಗಳನ್ನೂ ಅವರಿಗೆ ವಿರೋಧವಾಗಿ ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕ್ಷಯಿಸಿಹೋಗುವರವರು ಕ್ಷಾಮಡಾಮರದಿಂದ ಸಾಯುವರು ಶಾಪದಿಂದ, ಅಂಟುರೋಗಗಳಿಂದ, ನಾ ಕಳುಹಿಸುವ ಕಾಡುಮೃಗ, ವಿಷಸರ್ಪಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟಮೃಗಗಳನ್ನೂ ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:24
24 ತಿಳಿವುಗಳ ಹೋಲಿಕೆ  

ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.


ನಾನು ಕಳುಹಿಸುವ ಕ್ಷಾಮದಿಂದ ದುಷ್ಟಮೃಗಗಳಿಂದ ನಿನಗೆ ಪುತ್ರ ಶೋಕ ಪ್ರಾಪ್ತಿಯಾಗುವುದು. ವ್ಯಾಧಿಯೂ, ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು, ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು. ಇದು ಯೆಹೋವ ದೇವರಾದ ನನ್ನ ನುಡಿ.”


ಅವರ ಮುಂದೆ ವ್ಯಾಧಿಯು ಹೋಯಿತು. ವ್ಯಾಧಿಯು ಅವನ ಹೆಜ್ಜೆಗಳನ್ನು ಅನುಸರಿಸಿತು.


ಅವರು ಕರ್ಮೆಲಿನ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ, ಅಲ್ಲಿಂದ ತೆಗೆಯುವೆನು. ಅವರು ನನ್ನ ದೃಷ್ಟಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಸರ್ಪಕ್ಕೆ ಅಪ್ಪಣೆಕೊಟ್ಟು, ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.


“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?


“ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ,


ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.


“ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.”


“ನಾನು ಅವರಿಗೆ ವಿರೋಧವಾಗಿ ನಾಲ್ಕು ವಿಧವಾದ ವಿನಾಶಗಳನ್ನು ಎಂದರೆ, ಕೊಲ್ಲುವುದಕ್ಕೆ ಖಡ್ಗವನ್ನೂ, ಹರಿಯುವುದಕ್ಕೆ ನಾಯಿಗಳನ್ನು, ನುಂಗುವುದಕ್ಕೂ ನಾಶಮಾಡುವುದಕ್ಕೂ ಆಕಾಶದ ಪಕ್ಷಿಗಳನ್ನೂ, ಕಾಡುಮೃಗಗಳನ್ನೂ ನೇಮಿಸುತ್ತೇನೆ ಎಂಬುದು ಯೆಹೋವ ದೇವರಾದ ನನ್ನ ಮಾತು.


ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’ ”


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಪರಾಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳಿಂದ ನಿನಗೆ ಶಿಕ್ಷೆಯಾಗುವುದು.


ಅಂಧಕಾರದಲ್ಲಿ ಬೆನ್ನಟ್ಟಿ ಬರುವ ವಿಪತ್ತಿಗೆ ಕಳವಳಪಡದಿರುವೆ. ಮಧ್ಯಾಹ್ನದಲ್ಲಿ ಹಾಳುಮಾಡುವ ವ್ಯಾಧಿಗೂ ನೀನು ಭಯಪಡದಿರುವೆ.


ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಗರ್ಭದ ಫಲವನ್ನು ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.


ಯೆಹೋವ ದೇವರು ಕ್ಷಯರೋಗದಿಂದಲೂ, ಚಳಿಜ್ವರದಿಂದಲೂ, ಉರಿವಾತದಿಂದಲೂ, ಉಷ್ಣಜ್ವರದಿಂದಲೂ ಕುಗ್ಗಿಸಿ, ದೇಶವನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಯಿಂದಲೂ ಬಾಧಿಸುವರು. ನೀವು ನಾಶವಾಗುವ ತನಕ ಅವು ನಿಮ್ಮನ್ನು ಹಿಂದಟ್ಟಿಬರುವವು.


ವಿಶ್ರಾಂತಿಯು ಒಳ್ಳೆಯದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆ ಹೊರುವುದಕ್ಕೆ ತನ್ನ ಹೆಗಲನ್ನು ಬಗ್ಗಿಸಿ ಬಿಟ್ಟಿಯ ಕೆಲಸ ಮಾಡುವನು.


ಆಗ ಯೆಹೋವ ದೇವರು ಸರ್ಪಕ್ಕೆ ಹೀಗೆ ಹೇಳಿದರು, “ನೀನು ಇದನ್ನು ಮಾಡಿದ ಕಾರಣ, “ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಕಾಡುಮೃಗಗಳಲ್ಲಿಯೂ ನೀನು ಬಹು ಶಾಪಗ್ರಸ್ತನಾದೆ. ಇಂದಿನಿಂದ ನಿನ್ನ ಜೀವನ ಪೂರ್ತಿ ಹೊಟ್ಟೆಯಿಂದ ಹರಿದಾಡಿ, ಮಣ್ಣನ್ನು ತಿನ್ನುವೆ.


ಆದುದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬಡತನದಲ್ಲಿ ಬಟ್ಟೆಬರೆ ಏನೂ ಇಲ್ಲದೆ, ಯೆಹೋವ ದೇವರು ನಿಮ್ಮ ಮೇಲೆ ಕಳುಹಿಸುವ ಆ ಶತ್ರುಗಳಿಗೇ ನೀವು ಸೇವಕರಾಗಬೇಕಾಗುವುದು. ಯೆಹೋವ ದೇವರು ನಿಮ್ಮನ್ನು ನಾಶಮಾಡುವವರೆಗೆ ಕಬ್ಬಿಣದ ನೊಗವನ್ನು ನಿಮ್ಮ ಮೇಲೆ ಹೊರಿಸುವರು.


ಅವನು ಸರ್ಪಗಳ ವಿಷವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲುವುದು.


“ನಾನು ನಿಮ್ಮಲ್ಲಿ ವಿಷಸರ್ಪಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನೂ ಕಳುಹಿಸುತ್ತೇನೆ. ಅವು ನಿಮ್ಮನ್ನು ಕಚ್ಚುವವು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ಹಾವಿನಂತೆ, ನೆಲದ ಮೇಲೆ ತೆವಳುವ ಜೀವಿಗಳಂತೆ ಧೂಳನ್ನು ನೆಕ್ಕುತ್ತಾರೆ. ಅವರು ರಂಧ್ರಗಳಿಂದ ಹೊರಗೆ ಬರುವರು. ನಮ್ಮ ದೇವರಾದ ಯೆಹೋವ ದೇವರಿಗೆ ಅವರು ಹೆದರುವರು. ನಿನಗೆ ಭಯಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು