Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:28 - ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ಇಸ್ರಾಯೇಲರು ಆಲೋಚನೆ ಇಲ್ಲದ ಜನಾಂಗವೇ. ಅವರಲ್ಲಿ ವಿವೇಕವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ವಿವೇಚನೆಯಿಲ್ಲದ ಜನರು; ಅವರಿಗೆ ಸ್ವಲ್ಪವಾದರೂ ವಿವೇಕವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಆಲೋಚನೆಯಿಲ್ಲದ ಜನರಿವರು ಸ್ವಲ್ಪವಾದರೂ ವಿವೇಕವಿಲ್ಲದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಆಲೋಚನೆಯಿಲ್ಲದ ಜನರು; ಅವರಿಗೆ ಸ್ವಲ್ಪವಾದರೂ ವಿವೇಕವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಇಸ್ರೇಲರು ಬುದ್ಧಿಹೀನರಾಗಿದ್ದಾರೆ; ಅವರಿಗೇನೂ ತಿಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:28
12 ತಿಳಿವುಗಳ ಹೋಲಿಕೆ  

“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”


ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.


ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? ಜ್ಞಾನವಿಲ್ಲದ ಬುದ್ಧಿಹೀನ ಜನರೇ, ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ?


ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.


ಏಕೆಂದರೆ ಇಹಲೋಕ ಜ್ಞಾನವು ದೇವರ ದೃಷ್ಟಿಯಲ್ಲಿ ಮೂರ್ಖತನವಾಗಿದೆ, ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುವರು,” ಎಂದೂ


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.


ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು