Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:43 - ಕನ್ನಡ ಸಮಕಾಲಿಕ ಅನುವಾದ

43 ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 “ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಜನಾಂಗಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ದೇಶಕ್ಕೋಸ್ಕರವೂ ದೋಷಪರಿಹಾರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 “ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:43
40 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ಯೆಹೋವ ದೇವರೇ, ನಿಮ್ಮ ದೇಶವನ್ನು ನೀವು ದಯೆ ತೋರಿಸಿದ್ದೀರಿ. ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರಮಾಡಿದ್ದೀರಿ.


ಏಕೆ ನಿಮ್ಮ ಮುಖವನ್ನು ಮರೆಮಾಡುತ್ತೀರಿ? ನನ್ನನ್ನು ನಿಮ್ಮ ಶತ್ರುವಿನ ಹಾಗೆ ಏಕೆ ಭಾವಿಸುತ್ತೀರಿ?


ನಾನು ಪ್ರವಾದಿಗಳಾದ ನನ್ನ ಸೇವಕರ ರಕ್ತಕ್ಕೋಸ್ಕರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವಂತೆ ನೀನು ನಿನ್ನ ಯಜಮಾನನಾದ ಅಹಾಬನ ಮನೆಯನ್ನು ಸಂಹರಿಸಬೇಕು.


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.


ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.


ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು,


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”


ಕರ್ತದೇವರು ಶತ್ರುವಿನಂತೆ ಆಗಿ, ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾರೆ. ಕರ್ತದೇವರು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾರೆ. ಯೆಹೂದದ ದುಃಖವನ್ನೂ, ಪ್ರಲಾಪವನ್ನೂ ಹೆಚ್ಚಿಸಿದ್ದಾರೆ.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ನನ್ನ ಪ್ರಜೆಯಾದ ಈಜಿಪ್ಟಿಗೂ, ನನ್ನ ಕೈಕೆಲಸವಾದ ಅಸ್ಸೀರಿಯಕ್ಕೂ ಮತ್ತು ನನ್ನ ಸೊತ್ತಾದ ಇಸ್ರಾಯೇಲಿಗೂ, “ನಿಮಗೆ ಆಶೀರ್ವಾದ,” ಎಂದು ಸೇನಾಧೀಶ್ವರ ಯೆಹೋವ ದೇವರು ಅವುಗಳನ್ನು ಆಶೀರ್ವಾದ ಮಾಡುವರು.


ಆ ದಿವಸದಲ್ಲಿ ಈಜಿಪ್ಟಿನಿಂದ ಅಸ್ಸೀರಿಯಕ್ಕೆ ಹೋಗುವ ಒಂದು ರಾಜ ಮಾರ್ಗವಿರುವುದು. ಅಸ್ಸೀರಿಯದವರು ಈಜಿಪ್ಟಿಗೂ, ಈಜಿಪ್ಟಿನವರು ಅಸ್ಸೀರಿಯಕ್ಕೂ ಹೋಗಿ ಬರುವರು. ಈಜಿಪ್ಟಿನವರು, ಅಸ್ಸೀರಿಯರೊಂದಿಗೆ ಯೆಹೋವ ದೇವರನ್ನು ಆರಾಧಿಸುವರು.


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ನಾವು ನಮ್ಮ ಪಾಪಗಳಿಂದ ತುಂಬಿಹೋಗಿರುವಾಗ ನೀವೇ ನಮ್ಮ ದ್ರೋಹಗಳಿಗಾಗಿ ದೋಷಪರಿಹಾರಕರು.


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”


ನೀತಿವಂತರು ದುಷ್ಟರಿಗಾಗುವ ಪ್ರತಿದಂಡನೆಯನ್ನು ಕಂಡು ಹಿಗ್ಗಿ ತಮ್ಮ ಪಾದಗಳನ್ನು ದುಷ್ಟನ ರಕ್ತದ ಮೇಲಿಡಲಿ.


ನಮ್ಮ ರಕ್ಷಕರಾಗಿರುವವರೇ, ನಮ್ಮ ದೇವರೇ, ನಿಮ್ಮ ಹೆಸರಿನ ಘನದ ನಿಮಿತ್ತ ನಮಗೆ ಸಹಾಯಮಾಡಿರಿ. ನಿಮ್ಮ ಹೆಸರಿಗೆ ತಕ್ಕಂತೆ ನಮ್ಮನ್ನು ಬಿಡಿಸಿರಿ. ನಮ್ಮ ಪಾಪಗಳನ್ನು ತೊಳೆದುಬಿಡಿರಿ.


ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.


ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ, ನಿನ್ನ ಮಲಿನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಹಾಕುವೆನು.


“ಯೆರೂಸಲೇಮಿನ ಸಂಗಡ ನೀವು ಸಂತೋಷಿಸಿರಿ. ಅವಳನ್ನು ಪ್ರೀತಿ ಮಾಡುವವರೆಲ್ಲಾ ಆಕೆಯೊಂದಿಗೆ ಉಲ್ಲಾಸಪಡಿರಿ. ಅವಳಿಗೋಸ್ಕರ ದುಃಖಿಸಿದವರೆಲ್ಲರೂ, ಆಕೆಯ ಸಂತೋಷಕ್ಕಾಗಿ ಆನಂದಪಡಿರಿ.


ಅವರ ದೇವರು ಎಲ್ಲಿ ಎಂದು ಇತರ ಜನಾಂಗಗಳು ಏಕೆ ಹೇಳಬೇಕು? ಚೆಲ್ಲಿರುವ ನಿಮ್ಮ ಸೇವಕರ ರಕ್ತದ ಪ್ರತಿದಂಡನೆಯು ನಮ್ಮ ಕಣ್ಣುಗಳ ಮುಂದೆ ಇತರ ಜನಾಂಗಗಳಲ್ಲಿ ಗೊತ್ತಾಗಲಿ.


ನಿಮ್ಮ ಕೋಪವನ್ನೆಲ್ಲಾ ತೆಗೆದುಬಿಟ್ಟಿದ್ದೀರಿ. ನಿಮ್ಮ ಬೇಸರದಿಂದ ತಿರುಗಿಕೊಂಡಿದ್ದೀರಿ.


ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಮುಂಜಾನೆಯ ಮಂಜಿನಂತೆ ಹಾರಿಸಿದ್ದೇನೆ. ನನ್ನ ಕಡೆಗೆ ತಿರುಗಿಕೋ. ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದ್ದೇನೆ.”


ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು. ಮಿದ್ಯಾನಿನ ಏಫಾದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೆಬದಿಂದಲೂ ಬರುವುವು. ಬಂಗಾರವನ್ನೂ, ಧೂಪವನ್ನೂ ತರುವುವು. ಯೆಹೋವ ದೇವರ ಸ್ತೋತ್ರಗಳನ್ನು ಸಾರುವುವು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. ಅದರ ಸಮುದ್ರವನ್ನು ಒಣಗಿಸುತ್ತೇನೆ. ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ.


ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿತೀರಿಸುವೆನು, ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು, ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು, ಇದು ಸಾರ್ವಭೌಮ ಯೆಹೋವ ದೇವರ ನುಡಿ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು