Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:8 - ಕನ್ನಡ ಸಮಕಾಲಿಕ ಅನುವಾದ

8 ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇವಿುಸಿಕೊಟ್ಟಾಗ ಇಸ್ರಾಯೇಲ್ಯರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಎಷ್ಟು ಜನರು ಇದ್ದಾರೋ ಅಷ್ಟು ಜನಾಂಗಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:8
23 ತಿಳಿವುಗಳ ಹೋಲಿಕೆ  

ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.


“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


ಉನ್ನತ ಆಕಾಶಗಳು ಯೆಹೋವ ದೇವರದೇ, ಆದರೆ ಅವರು ಭೂಮಿಯನ್ನು ಮಾನವರಿಗೆ ಕೊಟ್ಟಿದ್ದಾರೆ.


ಯೆಹೋವ ದೇವರೇ, ನೀವಾದರೋ ಎಂದೆಂದಿಗೂ ಉನ್ನತರಾಗಿದ್ದೀರಿ.


ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.


ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತನು ಹುಟ್ಟಿದನು.


“ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:


“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.


ಉನ್ನತವಾದ ಮೇಘ ಮಂಡಲದ ಮೇಲೆ ಏರಿ, ಮಹೋನ್ನತರಿಗೆ ಸಮಾನನಾಗುವೆನು.”


“ನಾನು ಮುಂದುವರೆಸಿ ಅವರಿಗೆ ಹೇಳಿದ್ದು, ‘ನೀವು ದೇವರುಗಳು, ನೀವೆಲ್ಲರು ಮಹೋನ್ನತ ದೇವರ ಮಕ್ಕಳು,’ ಎಂದು ಹೇಳಿದೆನು.


“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.


ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.


ದೇವರ ಮಾತುಗಳನ್ನು ಕೇಳಿದವನೂ, ಮಹೋನ್ನತನ ಜ್ಞಾನವನ್ನು ತಿಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿದ್ದು ತೆರೆದ ಕಣ್ಣುಳ್ಳವನೂ ಹೇಳಿದ್ದು:


ಬೆಟ್ಟಗಳ ತುದಿಯಿಂದ ಅವರನ್ನು ನೋಡುತ್ತೇನೆ. ಎತ್ತರದ ಗುಡ್ಡಗಳಿಂದ ಅವರನ್ನು ದೃಷ್ಟಿಸಿದ್ದೇನೆ. ನಾನು ಆ ಪ್ರತ್ಯೇಕವಾಗಿ ವಾಸಿಸುವ ಜನರನ್ನು ನೋಡುತ್ತೇನೆ. ಆ ಜನಾಂಗವು ತಾನು ಇತರ ಜನಾಂಗಗಳಂತೆ ಸಾಧಾರಣವೆಂದು ಎಣಿಸುವುದಿಲ್ಲ.


ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ, ಧಾನ್ಯ, ಹೊಸ ದ್ರಾಕ್ಷಾರಸ ಸಮೃದ್ಧಿಯಾಗಿರುವ ನಾಡಿನಲ್ಲಿ, ಯಾಕೋಬನ ವಂಶದವರು ಸುರಕ್ಷಿತರಾದರು. ಇಸ್ರಾಯೇಲರು ನಿರ್ಭಯವಾಗಿ ವಾಸಿಸುವವರಾದರು.


ನೀವು ಭೂಮಿಯ ಮೇರೆಗಳನ್ನೆಲ್ಲಾ ನಿರ್ಣಯಿಸಿದ್ದೀರಿ. ಬೇಸಿಗೆ ಮತ್ತು ಚಳಿಗಾಲವನ್ನು ನೀವು ನಿರ್ಮಿಸಿದ್ದೀರಿ.


ಆದ್ದರಿಂದ ಚೀಟುಹಾಕಿ ದೇಶವನ್ನು ಹಂಚುವದಕ್ಕೆ ಯೆಹೋವ ದೇವರ ಸಭೆಯಲ್ಲಿ ನಿನಗೆ ಯಾರೂ ಇರುವುದಿಲ್ಲ.


ಇವರಿಂದ ಕಡಲತೀರದ ಹಾಗೂ ದ್ವೀಪಗಳ ನಿವಾಸಿಯರು ತಮ್ಮ ಸ್ವಂತ ದೇಶ, ಭಾಷೆ, ಕುಲ ಜನಾಂಗಗಳ ಪ್ರಕಾರ ಹರಡುತ್ತಿದ್ದರು.


“ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”


ಅವರಿಗೆ ದೇಶವು ಕೊಡಲಾಗಿತ್ತು; ಅವರ ಮಧ್ಯದಲ್ಲಿ ಅಂದು ಪರದೇಶೀಯರು ಹಾದುಹೋಗುವಂತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು