Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:17 - ಕನ್ನಡ ಸಮಕಾಲಿಕ ಅನುವಾದ

17 ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:17
27 ತಿಳಿವುಗಳ ಹೋಲಿಕೆ  

ದೇವರು ಅವರನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ. ಅವರಿಗೆ ಕಾಡುಕೋಣದಂಥ ಬಲವುಂಟು.


ನಿಮ್ಮಿಂದ ನಮ್ಮ ವೈರಿಗಳನ್ನು ದಬ್ಬುವೆವು; ನಿಮ್ಮ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.


ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು.


“ದೇವರು ಅವರನ್ನು ಈಜಿಪ್ಟಿನಿಂದ ಹೊರಗೆ ತಂದನು. ಈ ಕಾಡುಕೋಣದಂತೆ ಬಲ ಅವರಿಗೆ ಉಂಟು. ಅವರು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು, ಅವರ ಎಲುಬುಗಳನ್ನು ಚೂರುಮಾಡಿ, ತಮ್ಮ ಬಾಣಗಳಿಂದ ಗಾಯಮಾಡುವನು.


ಅದಕ್ಕೆ ಅವನ ತಂದೆಯು ಒಪ್ಪದೆ, “ನನಗೆ ಗೊತ್ತು. ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವುದಲ್ಲದೆ ಅವನು ದೊಡ್ಡವನಾಗುವನು. ಆದರೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತತಿಯು ಜನಾಂಗಗಳ ಸಮೂಹವಾಗುವುದು,” ಎಂದನು.


ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. ಅವರು ಸುಳ್ಳನ್ನು ನಡೆಸುತ್ತಾರೆ. ಕಳ್ಳನು ಒಳಗೆ ಬರುತ್ತಾನೆ ಮತ್ತು ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ.


ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಪ್ರೀತಿಯು ಹೊತ್ತಾರೆಯ ಮೇಘದ ಹಾಗೆಯೂ, ಮುಂಜಾನೆಯ ಮಂಜಿನ ಹಾಗೆಯೂ ಹೋಗಿಬಿಡುತ್ತದೆ.


ನಾನು ಎಫ್ರಾಯೀಮನ್ನು ಬಲ್ಲೆನು, ಇಸ್ರಾಯೇಲು ನನಗೆ ಮರೆಯಾದದ್ದಲ್ಲ. ಏಕೆಂದರೆ ಎಫ್ರಾಯೀಮೇ, ನೀನು ಈಗಲೇ ವ್ಯಭಿಚಾರ ಮಾಡಲು ತಿರುಗಿಕೊಂಡಿದ್ದೀ. ಇಸ್ರಾಯೇಲು ಸಹ ಅಪವಿತ್ರವಾಯಿತು.


ಕಾಡುಕೋಣಗಳೂ ಹೋರಿಗೂಳಿಗಳೂ ಈ ಯಜ್ಞಪಶುಗಳೊಂದಿಗೆ ಬೀಳುವುವು; ನಾಡು ರಕ್ತದಿಂದ ತೊಯ್ದಿರುವುದು; ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.


ಲೆಬನೋನ್ ಪರ್ವತವು ಕರುವಿನ ಹಾಗೆಯೂ ಸಿರ್ಯೋನ್ ಬೆಟ್ಟವು ಎಳೆಯ ಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾರೆ.


ಸಿಂಹಗಳ ಬಾಯಿಂದ ನನ್ನನ್ನು ರಕ್ಷಿಸಿರಿ; ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸಿರಿ.


ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಇಸ್ರಾಯೇಲಿನ ಚೊಚ್ಚಲಮಗನಾದ ರೂಬೇನನ ಪುತ್ರರು ಇವರು: ಅವನು ಚೊಚ್ಚಲ ಮಗನಾಗಿದ್ದನು. ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರ ಮಾಡಿದ್ದರಿಂದ ಅವನ ಚೊಚ್ಚಲುತನದ ಹಕ್ಕು ಇಸ್ರಾಯೇಲಿನ ಮಗ ಯೋಸೇಫನ ಪುತ್ರರಿಗೆ ಕೊಡಲಾಗಿತ್ತು. ಆದ್ದರಿಂದ ಈ ವಂಶಾವಳಿಯು ಚೊಚ್ಚಲುತನದ ಪ್ರಕಾರ ಬರೆದಿರುವುದಿಲ್ಲ.


ಎಫ್ರಾಯೀಮನ ಪುತ್ರರ ಎಫ್ರಾಯೀಮನ ಪುತ್ರರುಗಳು ಇವೇ. ಅವರಲ್ಲಿ ಲೆಕ್ಕಿತರಾದವರ ಸಂಖ್ಯೆ 32,500. ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.


ಮನಸ್ಸೆಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 52,700 ಪುರುಷರು.


ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. ನನ್ನ ಕೊಂಬು ಯೆಹೋವ ದೇವರಲ್ಲಿ ಉನ್ನತವಾಯಿತು. ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ.


ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, ಎಫ್ರಾಯೀಮ್ ನನ್ನ ಶಿರಸ್ತ್ರಾಣ, ಯೆಹೂದವು ನನ್ನ ರಾಜದಂಡ.


ಏಕೆಂದರೆ ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿಬಿಟ್ಟಿರಿ.


ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಕಾದಾಡುತ್ತಿರುವುದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವುದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವುದಕ್ಕೂ ಸಾಧ್ಯವಾಗುವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ, ತನ್ನನ್ನು ಹೆಚ್ಚಿಸಿಕೊಂಡಿತು.


ಯೋಸೇಫನ ಸಂತತಿಯರು ಯೆಹೋಶುವನಿಗೆ, “ಯೆಹೋವ ದೇವರು ನಮ್ಮನ್ನು ಈವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ, ನಾವು ಮಹಾ ಜನಾಂಗವಾಗಿದ್ದೇವೆ. ಹೀಗಿರುವಾಗ ನೀವು ನಮಗೆ ಸೊತ್ತಾಗಿ ಒಂದೇ ಒಂದು ಭಾಗವನ್ನು ಮಾತ್ರ ಪಾಲನ್ನಾಗಿ ಕೊಟ್ಟಿದ್ದು ಏಕೆ?” ಎಂದು ಕೇಳಿದರು.


ಏಕೆಂದರೆ ಅದು ಅಡವಿಯಾಗಿದೆ. ಅದನ್ನು ನೀವು ಕಡಿಯಬೇಕು. ಅದರ ಅಂತ್ಯಗಳವರೆಗೂ ನಿಮ್ಮದಾಗಿರುವುದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿಬಿಡಲು ನಿಮಗೆ ಸಾಧ್ಯ,” ಎಂದನು.


ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.


ಮನಸ್ಸೆಯ ಅರ್ಧ ಗೋತ್ರದ ಜನರು ದೇಶದಲ್ಲಿ ವಾಸಮಾಡಿ, ಬಾಷಾನ್ ಮೊದಲುಗೊಂಡು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಬೆಟ್ಟದವರೆಗೂ ಹಬ್ಬಿಕೊಂಡರು.


ಮನಸ್ಸೆಯ ಅರ್ಧಗೋತ್ರದಲ್ಲಿ 18,000 ಮಂದಿ. ಅವರು ದಾವೀದನನ್ನು ಅರಸನಾಗಿ ಮಾಡಲು ಬಂದವರ ಹೆಸರು ಹೆಸರಾಗಿ ಹೇಳಲು ಆಯ್ಕೆಯಾದವರು.


ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲರು ಮಾಡತಕ್ಕದ್ದು ಯಾವುದೆಂದು ತಿಳಿಯತಕ್ಕಂಥ ಕಾಲಗಳನ್ನು ಪರೀಕ್ಷಿಸಿ ತಿಳಿದವರು ಬಂದರು. ಅವರ ಯಜಮಾನರು 200 ಮಂದಿಯಾಗಿದ್ದರು. ಅವರ ಸಹೋದರರೆಲ್ಲರು ಇವರ ಆಜ್ಞಾಧೀನರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು