ಧರ್ಮೋಪದೇಶಕಾಂಡ 33:28 - ಕನ್ನಡ ಸಮಕಾಲಿಕ ಅನುವಾದ28 ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ, ಧಾನ್ಯ, ಹೊಸ ದ್ರಾಕ್ಷಾರಸ ಸಮೃದ್ಧಿಯಾಗಿರುವ ನಾಡಿನಲ್ಲಿ, ಯಾಕೋಬನ ವಂಶದವರು ಸುರಕ್ಷಿತರಾದರು. ಇಸ್ರಾಯೇಲರು ನಿರ್ಭಯವಾಗಿ ವಾಸಿಸುವವರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆದಕಾರಣ ಇಸ್ರಾಯೇಲ್ಯರು ಆಕಾಶದಿಂದ ಮಂಜು ಸುರಿದು ಧಾನ್ಯವೂ ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬ್ಸಂಭವರು ಸುರಕ್ಷಿತರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು. ಅಧ್ಯಾಯವನ್ನು ನೋಡಿ |