Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:3 - ಕನ್ನಡ ಸಮಕಾಲಿಕ ಅನುವಾದ

3 ನಿಶ್ಚಯವಾಗಿ ನೀವು ಜನರನ್ನು ಪ್ರೀತಿಸುತ್ತೀರಿ. ಪರಿಶುದ್ಧ ಜನರು ನಿಮ್ಮ ಆಶ್ರಯದಲ್ಲಿಯೇ ಇದ್ದಾರೆ. ನಿಮ್ಮ ಪಾದಗಳಿಗೆ ಎಲ್ಲರೂ ಎರಗುವರು. ನಿಮ್ಮಿಂದಲೇ ಬೋಧನೆ ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ತನ್ನ ಜನರನ್ನು ಪ್ರೀತಿಸುತ್ತಾನೆ; [ಯೆಹೋವನೇ,] ನಿನ್ನ ಭಕ್ತರೆಲ್ಲರೂ ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣ ಸನ್ನಿಧಾನದಲ್ಲಿ ಕೂತಿರುವರು; ನೀನು ಹೇಳುವ ಆಜ್ಞೆಗಳನ್ನು ಶಿರಸ್ಸಾವಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹೌದು, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಪವಿತ್ರ ಜನರೆಲ್ಲರೂ ಆತನ ಕೈಗಳಲ್ಲಿರುವರು. ಆತನ ಕಾಲ ಬಳಿಯಲ್ಲಿ ಕುಳಿತುಕೊಂಡು ಬೋಧನೆಯನ್ನು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:3
31 ತಿಳಿವುಗಳ ಹೋಲಿಕೆ  

ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು, ಆಕೆಯು ಕರ್ತದೇವರ ಪಾದಗಳ ಬಳಿಯಲ್ಲಿ ಕುಳಿತು ಅವರ ವಾಕ್ಯವನ್ನು ಕೇಳುತ್ತಿದ್ದಳು.


“ನಾನು ನಿಮ್ಮನ್ನು ಪ್ರೀತಿ ಮಾಡಿದೆನು” ಎಂದು ಯೆಹೋವ ದೇವರು ಹೇಳುತ್ತಾರೆ. “ನೀವಾದರೋ, ‘ಯಾವುದರಲ್ಲಿ ನೀವು ನಮ್ಮನ್ನು ಪ್ರೀತಿ ಮಾಡಿದ್ದೀರಿ?’ ಎಂದು ಕೇಳುತ್ತೀರಿ. “ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದರೂ ನಾನು ಯಾಕೋಬನನ್ನು ಪ್ರೀತಿ ಮಾಡಿದೆನು. ಎಂದು ಯೆಹೋವ ದೇವರು ಅನ್ನುತ್ತಾರೆ.


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


“ನಾನು ಕಿಲಿಕ್ಯದ ತಾರ್ಸದಲ್ಲಿ ಜನಿಸಿದ ಯೆಹೂದ್ಯನು, ಈ ಪಟ್ಟಣದಲ್ಲಿಯೇ ಬೆಳೆದವನು, ಗಮಲಿಯೇಲನ ಪಾದ ಸನ್ನಿಧಿಯಲ್ಲಿ ನಮ್ಮ ಪಿತೃಗಳ ನಿಯಮವನ್ನು ಸೂಕ್ಷ್ಮವಾಗಿ ಅಭ್ಯಾಸ ಮಾಡಿದೆ. ದೇವರ ವಿಷಯದಲ್ಲಿ, ಇಂದು ನೀವೆಲ್ಲರೂ ಇರುವಂತೆಯೇ ನಾನೂ ಆಸಕ್ತಿವುಳ್ಳವನಾಗಿದ್ದೆನು.


ಆಗ ಜನರು ನಡೆದ ಸಂಗತಿ ಏನೆಂದು ಕಾಣುವುದಕ್ಕಾಗಿ ಹೊರಟು ಯೇಸುವಿನ ಬಳಿಗೆ ಬಂದರು. ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ, ಬಳಿಯಲ್ಲಿ ಕುಳಿತಿರುವುದನ್ನು ಕಂಡು ಭಯಪಟ್ಟರು.


ಮೂರು ದಿವಸಗಳಾದ ಮೇಲೆ ಯೇಸುವನ್ನು ದೇವಾಲಯದಲ್ಲಿ ಕಂಡರು. ಬೋಧಕರ ನಡುವೆ ಕೂತುಕೊಂಡು, ಬಾಲಕ ಯೇಸು ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಾ, ಪ್ರಶ್ನಿಸುತ್ತಾ ಇರುವುದನ್ನು ಅವರು ಕಂಡರು.


“ಇಸ್ರಾಯೇಲನು ಹುಡುಗನಾಗಿದ್ದಾಗ, ನಾನು ಅವನನ್ನು ಪ್ರೀತಿ ಮಾಡಿದೆನು ಮತ್ತು ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು.


ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.


ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.


ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಕಾದಿರಿಸು.


“ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.”


ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ.


ನನ್ನ ಸಮಯವು ನಿಮ್ಮ ಕೈಯಲ್ಲಿ ಇವೆ; ನನ್ನ ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸಿರಿ.


ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು.


ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ.


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.


ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ.


ಹೇಳಿದ್ದೇನೆಂದರೆ: “ನಿಯಮ ಬೋಧಕರೂ ಫರಿಸಾಯರೂ ಮೋಶೆಯ ಆಸನದಲ್ಲಿ ಕುಳಿತಿದ್ದಾರೆ.


ದೇವರು ನಿಮ್ಮ ಪಿತೃಗಳನ್ನು ಪ್ರೀತಿಮಾಡಿದ್ದರಿಂದ, ಅವರ ತರುವಾಯ ಅವರ ಸಂತತಿಯನ್ನು ಆಯ್ದುಕೊಂಡು, ನಿಮ್ಮನ್ನು ತಮ್ಮ ದೃಷ್ಟಿಯಲ್ಲಿ ತಮ್ಮ ದೊಡ್ಡ ಬಲದಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಬೋಧಿಸಲು ನನಗೆ ನಡೆಸಿದ ಈ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನೂ ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದವುಗಳು ಇವೇ.


ನಾನು ಇವೆಲ್ಲವುಗಳ ಮೇಲೆ ಅಭ್ಯಾಸ ಮಾಡಿ ಈ ತೀರ್ಮಾನಕ್ಕೆ ಬಂದೆನು. ಅದೇನೆಂದರೆ, ನೀತಿವಂತರ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಆದರೆ ಅವರಿಗೆ ಪ್ರೀತಿ ಕಾದಿದೆಯೋ ಅಥವಾ ದ್ವೇಷ ಕಾದಿದೆಯೋ ಎಂದು ಯಾರಿಗೂ ಗೊತ್ತಿಲ್ಲ.


“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು