Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:15 - ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರಿ. ಯೆಹೋವ ದೇವರು ಹೋರೇಬಿನಲ್ಲಿ ಬೆಂಕಿಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಹೋರೇಬಿನಲ್ಲಿ” ಸರ್ವೇಶ್ವರ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದರು. ಆಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ಬಹಳ ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲವಷ್ಟೆ. ಆದದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಆ ದಿನ ಸೀನಾಯಿ ಬೆಟ್ಟದಲ್ಲಿ ಸ್ವರವನ್ನು ಮಾತ್ರ ಕೇಳಿದಿರಿ. ನೀವು ಯೆಹೋವನ ರೂಪವನ್ನು ನೋಡಲಿಲ್ಲ. ದೇವರಿಗೆ ಯಾವ ಆಕಾರವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:15
22 ತಿಳಿವುಗಳ ಹೋಲಿಕೆ  

ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?


ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.


ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮಗೆ ನೀವೇ ಎಚ್ಚರಿಕೆಯಾಗಿರಿ. ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತೆಗೆದುಕೊಂಡು ಬರಬೇಡಿರಿ.


ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.


ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.


ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು? ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.


ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವ ದೇವರನ್ನೇ ಪ್ರೀತಿಸಿರಿ.


ಬೆಂಕಿಯ ಮಧ್ಯದೊಳಗಿಂದ ಯೆಹೋವ ದೇವರು ನಿಮ್ಮ ಸಂಗಡ ಮಾತಾಡಿದರು. ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ, ಆದರೆ ಆಕಾರವನ್ನು ನೋಡಲಿಲ್ಲ, ಧ್ವನಿಯನ್ನು ಮಾತ್ರ ಕೇಳಿದಿರಿ.


ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.


ಇಸ್ರಾಯೇಲರು ಈಜಿಪ್ಟನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


ನೀವು ದಾಟಿ ಹೋಗಿ, ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನ್ಯಾಯನಿಯಮಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಯೆಹೋವ ದೇವರು ನನಗೆ ಆಜ್ಞಾಪಿಸಿದರು.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


ದೇವರು ನಿಮ್ಮ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತಮ್ಮ ಸ್ವರವನ್ನು ನಿಮಗೆ ಕೇಳಮಾಡಿದರು, ಭೂಮಿಯ ಮೇಲೆ ತಮ್ಮ ದೊಡ್ಡ ಬೆಂಕಿಯನ್ನು ನಿಮಗೆ ತೋರಿಸಿದರು. ನೀವು ಬೆಂಕಿಯೊಳಗಿಂದ ಅವರ ಮಾತುಗಳನ್ನು ಕೇಳಿದಿರಿ.


ಮುಖಾಮುಖಿಯಾಗಿ ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದರು.


ಆಗ ಯೆಹೋವ ದೇವರು ನನಗೆ ತಮ್ಮ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು. ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿನದಲ್ಲಿ ಹೇಳಿದ ಆಜ್ಞೆಗಳೆಲ್ಲಾ ಆ ಹಲಗೆಗಳಲ್ಲಿದ್ದವು.


ಆ ಹಲಗೆಗಳ ಮೇಲೆ ಯೆಹೋವ ದೇವರು ಮುಂಚೆ ಬರೆದಿದ್ದ ಪ್ರಕಾರ ಬರೆದರು. ಅವರು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿವಸದಲ್ಲಿ ಹೇಳಿದ ಆ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟರು.


ಭೂಕಂಪದ ತರುವಾಯ ಬೆಂಕಿಯು, ಆ ಬೆಂಕಿಯಲ್ಲಿ ಯೆಹೋವ ದೇವರು ಇರಲಿಲ್ಲ. ಬೆಂಕಿಯ ತರುವಾಯ ಮೃದುವಾದ ಸ್ವರವು ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು