Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:16 - ಕನ್ನಡ ಸಮಕಾಲಿಕ ಅನುವಾದ

16 ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳಬೇಡಿರಿ. ಎಂದರೆ, ಸ್ತ್ರೀಪುರುಷರ ರೂಪದಲ್ಲಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು ಸ್ತ್ರೀಪುರುಷರ ರೂಪವನ್ನಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀವು ಭ್ರಷ್ಟರಾಗದಂತೆ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ಸ್ತ್ರೀಪುರುಷರ ರೂಪದಲ್ಲಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ಸ್ತ್ರೀ ಪುರುಷರ ರೂಪವನ್ನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಜಾಗ್ರತೆಯಿಂದಿರಬೇಕು. ನೀವು ಪಾಪಮಾಡಿ ನಿಮ್ಮನ್ನು ನಾಶಪಡಿಸಿಕೊಳ್ಳಬೇಡಿ. ಮನುಷ್ಯನ ರೂಪವನ್ನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:16
22 ತಿಳಿವುಗಳ ಹೋಲಿಕೆ  

“ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.


ಆಗ ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗು ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.


ದೇವರು ಆತ್ಮರಾಗಿದ್ದಾರೆ. ಅವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು,” ಎಂದರು.


ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?


ನಿಮ್ಮಿಂದ ಮಕ್ಕಳೂ, ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು, ತರುವಾಯ ಯಾವುದಾದರೂ ಕೆತ್ತಿದ ವಿಗ್ರಹವನ್ನು ಮಾಡಿ ನಿಮ್ಮನ್ನು ಕೆಡಿಸಿಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಅವರಿಗೆ ಕೋಪಗೊಳಿಸಿದರೆ,


ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.


“ ‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಆಗ ಯೆಹೋವ ದೇವರು, “ಎದ್ದು ಇಲ್ಲಿಂದ ಬೇಗ ಇಳಿದು ಹೋಗು. ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ಕೆಟ್ಟು ಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡಿದ್ದಾರೆ,” ಎಂದು ನನಗೆ ಹೇಳಿದರು.


“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು.


“ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಯಾವ ವಿಗ್ರಹವನ್ನೂ ನಿಲ್ಲಿಸಬಾರದು. ಇದನ್ನು ನಿನ್ನ ಯೆಹೋವ ದೇವರು ದ್ವೇಷಿಸುತ್ತಾರೆ.


ಬಡಗಿಯು ಮರಕ್ಕೆ ನೂಲನ್ನು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ. ಉಳಿಬಾಚಿಗಳಿಂದ ಕೆತ್ತುತ್ತಾನೆ. ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾರಕ್ಕೆ ತಂದು, ಮಂದಿರದಲ್ಲಿ ಇಡಲು ಮನುಷ್ಯನ ಅಂದದಂತೆ ರೂಪಿಸುತ್ತಾನೆ.


ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ, ಇಸ್ರಾಯೇಲರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು