Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:21 - ಕನ್ನಡ ಸಮಕಾಲಿಕ ಅನುವಾದ

21 ನಾನು ಯೊರ್ದನಿನ ಆಚೆಗೆ ಹೋಗದ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಆ ಒಳ್ಳೆಯ ದೇಶದಲ್ಲಿ ಪ್ರವೇಶಿಸದಂತೆ, ನಿಮ್ಮ ನಿಮಿತ್ತ ಯೆಹೋವ ದೇವರು ನನ್ನ ಮೇಲೆ ಕೋಪಮಾಡಿಕೊಂಡು ಪ್ರಮಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಇದಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪಗೊಂಡರು. ನಾನು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವನ್ನಾಗಿ ಕೊಡುವ ಆ ಚೆಲುವ ನಾಡನ್ನು ನಾನು ಸೇರಬಾರದೆಂದೂ ಇಲ್ಲಿಯೇ ಸಾಯಬೇಕೆಂದೂ ಖಂಡಿತವಾಗಿ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಿಮ್ಮ ದೆಸೆಯಿಂದ ಯೆಹೋವನು ನನ್ನ ಮೇಲೆ ಸಿಟ್ಟುಗೊಂಡನು. ಆ ಕಾರಣದಿಂದ ಕಾನಾನ್ ದೇಶವನ್ನು ನಾನು ಪ್ರವೇಶಿಸಬಾರದು ಎಂದು ನನಗೆ ಹೇಳಿರುತ್ತಾನೆ. ಜೋರ್ಡನ್ ನದಿಯಾಚೆ ನಿಮಗೆ ಕೊಡುವ ಆ ಉತ್ತಮ ದೇಶವನ್ನು ನಾನು ನೋಡುವುದಿಲ್ಲವೆಂದು ಪ್ರಮಾಣ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:21
13 ತಿಳಿವುಗಳ ಹೋಲಿಕೆ  

ನನ್ನ ಮೇಲೆಯೂ ಯೆಹೋವ ದೇವರು ನಿಮ್ಮ ವಿಷಯವಾಗಿ ಬೇಸರಮಾಡಿಕೊಂಡು, “ನೀನು ಸಹ ಅದರಲ್ಲಿ ಪ್ರವೇಶಿಸುವುದಿಲ್ಲ.


ಆಗ ಯೆಹೋವ ದೇವರು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ, “ನನ್ನಲ್ಲಿ ವಿಶ್ವಾಸವಿಡದೆ ಹೋದಕಾರಣ ನೀವು ಇಸ್ರಾಯೇಲರ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧನಾಗಿ ಗೌರವಿಸುವುದಕ್ಕೆ, ನಾನು ಅವರಿಗೆ ಕೊಡುವ ದೇಶದಲ್ಲಿ ನೀವು ಅವರನ್ನು ಸೇರಿಸುವುದಿಲ್ಲ,” ಎಂದರು.


“ನಾನು ಈ ಹೊತ್ತು ನೂರ ಇಪ್ಪತ್ತು ವರ್ಷದವನಾಗಿದ್ದೇನೆ. ಇನ್ನು ಮುಂದೆ ನಿಮ್ಮನ್ನು ಮುನ್ನಡೆಸಲು ನನಗೆ ಸಾಧ್ಯವಾಗುತ್ತಿಲ್ಲ. ಇದಲ್ಲದೆ ಯೆಹೋವ ದೇವರು ನನಗೆ, ‘ನೀನು ಈ ಯೊರ್ದನನ್ನು ದಾಟುವುದಿಲ್ಲ,’ ಎಂದು ಹೇಳಿದ್ದಾರೆ.


ಆದರೆ ಯೆಹೋವ ದೇವರು ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಮಾಡಿ, ನನ್ನ ಮನವಿಯನ್ನು ಕೇಳಲಿಲ್ಲ. ಯೆಹೋವ ದೇವರು ನನಗೆ, “ಇನ್ನು ಸಾಕು, ಈ ವಿಷಯದಲ್ಲಿ ನನ್ನ ಸಂಗಡ ಇನ್ನು ಮಾತನಾಡಬೇಡ.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ವಿಶ್ರಾಂತಿಗೂ, ಸೊತ್ತಿಗೂ ನೀವು ಇನ್ನೂ ಸೇರಲಿಲ್ಲ.


ಏಕೆಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದಲ್ಲಿ ಯೆಹೋವ ದೇವರು ನಿಮ್ಮನ್ನು ಬಹಳವಾಗಿ ಆಶೀರ್ವದಿಸುವರು. ಹೀಗಾಗಿ ನಿಮ್ಮಲ್ಲಿ ಬಡವರೇ ಇರುವುದಿಲ್ಲ.


ಕೈತಪ್ಪಿ ಕೊಲೆ ಮಾಡುವವರೆಲ್ಲರೂ ಅಲ್ಲಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದ ಮೇರೆಯನ್ನು ಮೂರು ಭಾಗಮಾಡಿ, ಅವುಗಳ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು, ಅಂಥವನಿಗೆ ಮರಣಶಿಕ್ಷೆಯಾದರೆ ಆ ರಕ್ತಾಪರಾಧ ನಿಮ್ಮದಾಗಿಯೇ ಇರುವುದು.


ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಈ ಜನರ ಪಟ್ಟಣಗಳಲ್ಲಿ ಉಸಿರಾಡುವ ಯಾವುದನ್ನಾದರೂ ಉಳಿಸಬಾರದು.


ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.


ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡ ಅವಳನ್ನು ಪುನಃ ಹೆಂಡತಿಯಾಗಿ ಸ್ವೀಕರಿಸಬಾರದು. ಅದು ಯೆಹೋವ ದೇವರ ಮುಂದೆ ಅಸಹ್ಯವೇ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ದೋಷವುಂಟಾಗಲು ಅವಕಾಶ ಕೊಡಬಾರದು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವತ್ತಾಗಿ ಕೊಡುವ ದೇಶಕ್ಕೆ ನೀವು ಬಂದು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು