Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:42 - ಕನ್ನಡ ಸಮಕಾಲಿಕ ಅನುವಾದ

42 ಯಾವ ಹಗೆಯಿಲ್ಲದೆ ತನ್ನ ನೆರೆಯವನನ್ನು ಕೈತಪ್ಪಿ ಕೊಂದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳುವಂತೆ ಆ ನಗರಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಪೂರ್ವಕಲ್ಪಿತ ಯಾವ ದ್ವೇಷವೂ ಇಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ನಗರಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಮೊದಲು ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯಾವನಾದರೂ ಒಬ್ಬ ಮನುಷ್ಯನನ್ನು ಉದ್ದೇಶವಿಲ್ಲದೆ ಆಕಸ್ಮಿಕವಾಗಿ ಕೊಂದರೆ ಅವನು ಈ ಮೂರು ನಗರಗಳಲ್ಲಿ ಯಾವುದಾದರೊಂದರಲ್ಲಿ ಆಶ್ರಯ ತೆಗೆದುಕೊಂಡಲ್ಲಿ ಅವನು ಮರಣದಂಡನೆಯಿಂದ ಪಾರಾಗುವನು ಅಂದರೆ ಅವನು ಕೊಲೆಯಾದವನನ್ನು ದ್ವೇಷಿಸದೆ ಇದ್ದಲ್ಲಿ ಮತ್ತು ಅವನನ್ನು ಕೊಲ್ಲಬೇಕೆಂಬ ಉದ್ದೇಶವಿಲ್ಲದಿದ್ದಲ್ಲಿ ಕೊಲೆಗಾರನು ಆ ನಗರದಲ್ಲಿ ಸುರಕ್ಷಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:42
7 ತಿಳಿವುಗಳ ಹೋಲಿಕೆ  

ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


“ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯ ಹತ್ಯೆ ಮಾಡಿದವನು ಅಲ್ಲಿಗೆ ಓಡುವ ಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು. ಅವುಗಳ ಹೊರತು ನೀವು ನಲವತ್ತೆರಡು ಪಟ್ಟಣಗಳನ್ನು ಕೊಡಬೇಕು.


ಮೋಶೆಯು ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ನಗರಗಳನ್ನು ಪ್ರತ್ಯೇಕ ಮಾಡಿದನು.


ಅವು ಯಾವುವೆಂದರೆ, ರೂಬೇನ್ಯರಿಗೆ ಮರುಭೂಮಿಯ ಬಯಲಿನಲ್ಲಿ ಇರುವ ಬೆಚೆರ್, ಗಾದನವರಿಗೆ ಗಿಲ್ಯಾದಿನ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು