Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:26 - ಕನ್ನಡ ಸಮಕಾಲಿಕ ಅನುವಾದ

26 ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳಗಿಂದ ಮಾತನಾಡುವ ಜೀವವುಳ್ಳ ದೇವರ ಸ್ವರವನ್ನು ಕೇಳಿ ಬದುಕಿದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಗ್ನಿಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪರಾದ ದೇವರ ಸ್ವರವನ್ನು ನಮ್ಮಂತೆ ಕೇಳಿಯೂ ಬದುಕಿರುವ ಮಾನವ ಯಾರಿದ್ದಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಬೆಂಕಿಯ ಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಬೇರೆ ಯಾರು ಕೇಳಿ ಬದುಕಿದರು? ಹೀಗಿರುವದರಿಂದ ನಾವು ಯಾಕೆ ಸಾಯಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಜೀವಸ್ವರೂಪನಾದ ದೇವರ ನುಡಿಯನ್ನು ಪ್ರತ್ಯಕ್ಷವಾಗಿ ನಾವು ಕೇಳಿದ ಹಾಗೆ ಬೇರೆ ಯಾರೂ ಕೇಳಿಲ್ಲ. ಆದರೂ ನಾವು ಜೀವದಿಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:26
19 ತಿಳಿವುಗಳ ಹೋಲಿಕೆ  

ನೀವು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೋ?


ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


“ಪ್ರಿಯ ಜನರೇ, ನೀವಿದನ್ನು ಏಕೆ ಮಾಡುತ್ತಿರುವಿರಿ? ನಾವೂ ನಿಮ್ಮ ಹಾಗೆಯೇ ಮಾನವರು. ಇಂಥಾ ವ್ಯರ್ಥವಾದ ಸಂಗತಿಗಳನ್ನು ಬಿಟ್ಟು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದ ಜೀವಿಸುವ ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನಿಮಗೆ ಸುವಾರ್ತೆಯನ್ನು ಸಾರುತ್ತಿದ್ದೇವೆ.


ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.


“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.


ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


ವಾಣಿಯು, “ಗಟ್ಟಿಯಾಗಿ ಕೂಗು,” ಎಂದಿತು. ಅದಕ್ಕೆ, “ನಾನು ಏನೆಂದು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅವರ ಸೊಬಗೆಲ್ಲಾ ಹೊಲದ ಹೂವಿನಂತಿದೆ,


ಯೆಹೋವ ದೇವರ ಅಂಗಳಗಳಲ್ಲಿ ಸೇರಲು ನನ್ನ ಪ್ರಾಣವು ಬಯಸಿ ಕುಂದುತ್ತದೆ. ನನ್ನ ಹೃದಯವೂ, ನನ್ನ ಶರೀರವೂ ಜೀವವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.


ದೇವರಿಗೋಸ್ಕರ ಹೌದು ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ. ನಾನು ಯಾವಾಗ ಹೋಗಿ ದೇವರ ಮುಂದೆ ಕಾಣಿಸಿಕೊಳ್ಳಲಿ?


ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.


ದೇವರು ಭೂಮಿಯನ್ನು ನೋಡಲಾಗಿ ಅದು ಕೆಟ್ಟುಹೋಗಿತ್ತು, ಮನುಷ್ಯರೆಲ್ಲರೂ ಭೂಮಿಯ ಮೇಲೆ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.


ಯೆಹೋವ ದೇವರು ಮೋಶೆಗೆ, “ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.


ನೀನೇ ಸಮೀಪಕ್ಕೆ ಹೋಗಿ ನಮ್ಮ ದೇವರಾದ ಯೆಹೋವ ದೇವರು ಹೇಳುವುದನ್ನೆಲ್ಲಾ ಕೇಳಿ, ನಮ್ಮ ದೇವರಾದ ಯೆಹೋವ ದೇವರು ನಿನಗೆ ಹೇಳಿದ್ದನ್ನೆಲ್ಲಾ ನಮಗೆ ಹೇಳು. ಆಗ ನಾವು ಕೇಳಿ ಅದರಂತೆ ಮಾಡುತ್ತೇವೆ,” ಎಂದು ಹೇಳಿದಿರಿ.


ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಂಡದ್ದರಿಂದ ನಿಶ್ಚಯವಾಗಿ ಸಾಯುವೆವು,” ಎಂದನು.


ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.


ಯಾಕೋಬನು ಪೆನೀಯೇಲನ್ನು ದಾಟಿಹೋದಾಗ, ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.


“ನಿನ್ನ ದೇವರು ಎಲ್ಲಿ?” ಎಂದು ಜನರು, ದಿನವೆಲ್ಲಾ ನನ್ನನ್ನು ಕೇಳುವುದರಿಂದ ಹಗಲುರಾತ್ರಿ ನನ್ನ ಕಣ್ಣೀರೇ ನನಗೆ ಆಹಾರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು