Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:12 - ಕನ್ನಡ ಸಮಕಾಲಿಕ ಅನುವಾದ

12 ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಗಸ್ತಿಕೆಯಿಂದ ನೆರವೇರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ನಿಮ್ಮಲ್ಲಿ ನೆರವೇರಿಸುವವನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನೀವು ಈ ಕಟ್ಟಳೆಗಳಿಗೆ ಕಿವಿಗೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:12
19 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ಹೀಗಿರುವುದರಿಂದ ನಾನು ಈ ಹೊತ್ತು ನಿಮಗೆ ಕೊಡುವ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನು ಕೈಗೊಳ್ಳಬೇಕು.


ಹಾಗಾದರೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಯಕೊಟ್ಟು ಕೇಳಿ, ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ ಅವರಿಗೆ ಸೇವೆ ಮಾಡಿದರೆ,


ಬರೆದಿರುವ ನ್ಯಾಯವಿಧಿಯು ಅವರಲ್ಲಿ ನೆರವೇರಲಿ, ದೇವರ ಭಕ್ತರೆಲ್ಲರಿಗೆ ಈ ಗೌರವವಿರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.


ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” “ಓ ಯೆಹೋವ ದೇವರೇ, ಹಾಗೆಯೇ ಆಗಲಿ,” ಎಂದೆನು.


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ಆದರೆ ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


ಹೀಗೆ ಪ್ರಾರ್ಥಿಸಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಮೇಲಿರುವ ಆಕಾಶದಲ್ಲಾದರೂ, ಕೆಳಗಿರುವ ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುವವರೇ,


ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ,


“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.


ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು.


ನಾನು ನನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥಿಸಿ, ಅರಿಕೆಮಾಡಿದೆನು: “ಕರ್ತನೇ, ಮಹೋನ್ನತ ಮತ್ತು ಅದ್ಭುತ ದೇವರೇ, ನಿಮ್ಮನ್ನು ಪ್ರೀತಿಮಾಡಿ, ನಿಮ್ಮ ಆಜ್ಞೆಗಳನ್ನು ಕೈಗೊಂಡು ನಡೆಯುವವರಿಗೆ ಒಡಂಬಡಿಕೆಯ ಪ್ರೀತಿಯನ್ನೂ ಇಟ್ಟು ನೆರವೇರಿಸುವವರೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು