Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:17 - ಕನ್ನಡ ಸಮಕಾಲಿಕ ಅನುವಾದ

17 “ಈ ಜನಾಂಗದವರು ನಮಗಿಂತ ಹೆಚ್ಚು ಮಂದಿ ಇದ್ದಾರೆ. ನಾವು ಹೇಗೆ ಅವರನ್ನು ವಶಮಾಡಿಕೊಳ್ಳಬೇಕು?” ಎಂದು ನಿಮ್ಮ ಹೃದಯದಲ್ಲಿ ಅಂದುಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ‘ಆ ಜನರು ನಮಗಿಂತ ಹೆಚ್ಚುಮಂದಿ ಇದ್ದಾರೆ; ಅವರನ್ನು ಹೊರದೂಡಲು ನಮ್ಮಿಂದ ಹೇಗಾದೀತು? ಎಂದುಕೊಳ್ಳುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಜನಗಳು ನಮಗಿಂತ ಹೆಚ್ಚು ಮಂದಿ; ಅವರನ್ನು ಹೊರಡಿಸುವದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನಿಮ್ಮ ಮನಸ್ಸಿನಲ್ಲಿ, ‘ಈ ಜನಾಂಗಗಳು ನಮ್ಮ ಜನಾಂಗಗಳಿಗಿಂತ ದೊಡ್ಡದಾಗಿವೆ. ಇವರನ್ನು ಹೀಗೆ ಹೊರಡಿಸಲು ಸಾಧ್ಯವೇ ಎಂದು ಯಾಕೆ ಅಂದುಕೊಳ್ಳುತ್ತೀರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:17
14 ತಿಳಿವುಗಳ ಹೋಲಿಕೆ  

ನೀವು ಆ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸಮಾಡಿರಿ. ಏಕೆಂದರೆ ಅದನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.


ಅವರು ಸಂಚರಿಸಿ ನೋಡಿದಂಥ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿ ಬಂದ ದೇಶವು ತನ್ನಲ್ಲಿ ವಾಸವಾಗಿರುವವರನ್ನೇ ತಿಂದುಬಿಡುವ ದೇಶವಾಗಿದೆ. ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾ ಶರೀರದ ಮನುಷ್ಯರು.


ಯೇಸು, ಅವರ ಮನದ ಆಲೋಚನೆಯನ್ನು ತಿಳಿದವರಾಗಿ, ಒಂದು ಮಗುವನ್ನು ತಮ್ಮ ಬಳಿಯಲ್ಲಿ ನಿಲ್ಲಿಸಿ,


‘ನನಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನು ದುಃಖಿತ ಮತ್ತು ಬಂಜೆಯಾಗಿದ್ದೆ; ನನ್ನನ್ನು ಗಡಿಪಾರು ಮಾಡಿ ತಿರಸ್ಕರಿಸಲಾಯಿತು. ಇವುಗಳನ್ನು ತಂದವರು ಯಾರು? ನಾನು ಒಬ್ಬಂಟಿಯಾಗಿ ಉಳಿದಿದ್ದೇನೆ, ಇವರನ್ನು ಸಾಕಿದವರು ಯಾರು? ಅವರೆಲ್ಲಿದ್ದರು?’ ” ಎಂದುಕೊಳ್ಳುವೆ.


“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ. ‘ನಾನು ವಿಧವೆಯಾಗಿ ಕೂತುಕೊಳ್ಳುವುದಿಲ್ಲ. ಪುತ್ರ ಶೋಕವನ್ನು ಅನುಭವಿಸುವುದಿಲ್ಲ,’ ಎನ್ನುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.


ನೀನು ನಿನ್ನ ಹೃದಯದಲ್ಲಿ ಹೀಗೆ ಎಂದುಕೊಂಡಿಯಲ್ಲಾ, “ನಾನು ಆಕಾಶಕ್ಕೆ ಏರಿ, ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು. ಉತ್ತರ ದಿಕ್ಕಿನ ಕಡೆಗಿರುವ ಜಫೋನ್ ಪರ್ವತದ ಮೇಲೆಯೂ ನಾನು ಆಸೀನನಾಗುವೆನು.


ಇದಲ್ಲದೆ ನೀವು, “ಇದು ಯೆಹೋವ ದೇವರು ಹೇಳಿದ ವಾಕ್ಯವು ಅಲ್ಲ ಎಂದು ನಾವು ತಿಳಿದುಕೊಳ್ಳುವುದು ಹೇಗೆ?” ಎಂದು ನೀವು ನಿಮ್ಮ ಹೃದಯದಲ್ಲಿ ಆಲೋಚಿಸಬಹುದು.


“ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ.


ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ.


ಒಂದು ವೇಳೆ, “ಇವು ನನಗೆ ಏಕೆ ಸಂಭವಿಸಿದವು?” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ನೆರಿಗೆಯು ಕೀಳಲಾಗುವುದು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.


ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ.


ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿದ ಎಲ್ಲವನ್ನೂ ನೋಡಿದ್ದೀರಿ. ನಿಮಗೋಸ್ಕರವಾಗಿ ಯುದ್ಧ ಮಾಡಿದವರು ನಿಮ್ಮ ದೇವರಾದ ಯೆಹೋವ ದೇವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು