Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:3 - ಕನ್ನಡ ಸಮಕಾಲಿಕ ಅನುವಾದ

3 ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮನುಷ್ಯರು ಆಹಾರಮಾತ್ರದಿಂದಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾರೆಂಬದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಹಸಿವೆಯಿಂದ ಬಳಲಿಸಿ ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:3
15 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’” ಎಂದರು.


ಅದಕ್ಕೆ ಯೇಸು ಉತ್ತರವಾಗಿ ಅವನಿಗೆ, “ ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಅವರೆಲ್ಲರೂ ಒಂದೇ ಆತ್ಮಿಕವಾದ ಆಹಾರವನ್ನು ಉಂಡರು.


ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.


ಅವರು ಕೇಳಿದಾಗ ದೇವರು ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ಆಹಾರದಿಂದ ಅವರನ್ನು ತೃಪ್ತಿಪಡಿಸಿದರು.


ಆ ಕಲ್ಲಿನ ಹಲಗೆಗಳು ಅಂದರೆ, ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ, ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ.


ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವ ದೇವರೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.”


ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು.


“ನಾನು ನಲವತ್ತು ವರ್ಷ ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿದೆನು. ನಿಮ್ಮ ಮೇಲಿರುವ ವಸ್ತ್ರಗಳು ಹರಿಯಲಿಲ್ಲ. ನಿಮ್ಮ ಪಾದಗಳಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು