ಧರ್ಮೋಪದೇಶಕಾಂಡ 9:1 - ಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಇಸ್ರಯೇಲರೇ ಕೇಳಿ : ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲ್ಯರೇ ಕೇಳಿರಿ. ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಈ ಯೊರ್ದನ್ ಹೊಳೆಯನ್ನು ಇಂದು ದಾಟುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ; ಅಧ್ಯಾಯವನ್ನು ನೋಡಿ |
ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.