Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:12 - ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರೊಂದಿಗೆ ಒಪ್ಪಂದ ಮಾಡಿಕೊಂಡವರಿದ್ದರೂ, ಅವರು ಬಹುಮಂದಿಯಾಗಿದ್ದರೂ ನಾಶಕ್ಕೆ ಒಳಗಾಗುವರು. ಯೆಹೂದವೇ, ನಾನು ನಿನ್ನನ್ನು ಕಷ್ಟಪಡಿಸಿದಾಗ್ಯೂ, ಇನ್ನು ಮೇಲೆ ಕಷ್ಟಪಡಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಇಂತೆನ್ನುತ್ತಾನೆ - ನಿನ್ನ ಶತ್ರುಗಳು ಎಷ್ಟು ಪ್ರಬಲರಾಗಿದ್ದರೂ ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು, ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಇನ್ನು ಬಾಧಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಯೆಹೂದನಿಗೆ ಇಂತೆಂದೆನು: “ಅಶ್ಶೂರದ ಜನರು ಬಲಶಾಲಿಗಳು. ಅವರಲ್ಲಿ ಅಸಂಖ್ಯಾತ ಸೈನಿಕರಿದ್ದಾರೆ. ಆದರೆ ಅವರೆಲ್ಲಾ ತುಂಡರಿಸಲ್ಪಡುವರು. ಅವರೆಲ್ಲಾ ಹತರಾಗುವರು. ನನ್ನ ಜನರೇ, ನೀವು ಕಷ್ಟ ಅನುಭವಿಸುವಂತೆ ಮಾಡಿದೆನು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:12
20 ತಿಳಿವುಗಳ ಹೋಲಿಕೆ  

ಯೆಹೋವ ದೇವರು ತನ್ನ ಜನರಿಗೆ ಉತ್ತರಕೊಟ್ಟು, ನಾನು ನಿಮಗೆ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ನಿಮಗೆ ಸಾಕಾಗುವಷ್ಟು ಕಳುಹಿಸಿ, ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತರಾಗಿ ಇಡುವುದಿಲ್ಲ.


‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ; ಬಾಯಾರಿಕೆಯಾಗಲಿ ಆಗುವುದಿಲ್ಲ. ಇದಲ್ಲದೆ ಸೂರ್ಯನ ಬಿಸಿಲಾದರೂ,’ ಯಾವ ಝಳವಾದರೂ ಇವರಿಗೆ ತಟ್ಟುವುದಿಲ್ಲ.


ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಹರಕೆಗಳನ್ನು ಸಲ್ಲಿಸು. ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು. ಅವರು ಸಂಪೂರ್ಣವಾಗಿ ನಾಶವಾಗುವರು.


ಅವನ ಮಕ್ಕಳು ಯುದ್ಧಕ್ಕೆ ಸಿದ್ಧರಾಗಿ ದೊಡ್ಡ ಸೈನ್ಯ ಕೂಡಿಸುವರು. ಆ ಸೈನ್ಯವು ನಿಬಂಧಿಸಲಾಗದ ಪ್ರವಾಹದಂತೆ ಹರಿದುಬಂದು, ಯುದ್ಧವನ್ನು ಅವನ ಕೋಟೆಯವರೆಗೆ ನಡೆಸುವರು.


ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ, ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನಾನು ನಿನ್ನ ಕೈಯೊಳಗಿಂದ ತತ್ತರಿಸುವಂಥ ಪಾತ್ರೆಯನ್ನೂ, ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ. ಇನ್ನು ಮೇಲೆ ನೀನು ಅದನ್ನು ತಿರುಗಿ ಕುಡಿಯುವುದೇ ಇಲ್ಲ.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು.


ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು.


ಸಾಯಂಕಾಲದಲ್ಲಿ ಭಯಭ್ರಾಂತಿ, ಉದಯಕ್ಕೆ ಮುಂಚೆ ಅವು ಇಲ್ಲದಂತಾಗುವುದು. ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುಯೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವುವು.”


ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು.


ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


“ಏಕೆಂದರೆ ನಾನು ಈ ರಾತ್ರಿ ಈಜಿಪ್ಟ್ ದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಇರುವ ಚೊಚ್ಚಲಾದವುಗಳನ್ನು ಸಂಹರಿಸುವೆನು. ಈಜಿಪ್ಟಿನ ದೇವರುಗಳಿಗೆಲ್ಲಾ ನಾನು ನ್ಯಾಯತೀರಿಸುವೆನು. ನಾನೇ ಯೆಹೋವ ದೇವರು.


ಆದಕಾರಣ ಸೇನಾಧೀಶ್ವರ ಯೆಹೋವ ದೇವರು ಅವನ ಕೊಬ್ಬಿದ ಯೋಧರಿಗೆ ಕ್ಷಯವನ್ನು ಉಂಟುಮಾಡುವರು, ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು