Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:15 - ಕನ್ನಡ ಸಮಕಾಲಿಕ ಅನುವಾದ

15 ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಹರಕೆಗಳನ್ನು ಸಲ್ಲಿಸು. ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು. ಅವರು ಸಂಪೂರ್ಣವಾಗಿ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಪರ್ವತಗಳ ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟನು ಇನ್ನು ಮುಂದೆ ನಿನ್ನನ್ನು ಹಾದುಹೋಗನು; ತೀರಾ ನಾಶವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:15
21 ತಿಳಿವುಗಳ ಹೋಲಿಕೆ  

ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!


ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


ಆ ದೂತನು ಅವರಿಗೆ, “ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.


ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ವೈಭವದ ಉಡುಪುಗಳನ್ನು ಹಾಕಿಕೋ ಏಕೆಂದರೆ ಇಂದಿನಿಂದ ಸುನ್ನತಿ ಇಲ್ಲದವರೂ, ಅಶುದ್ಧರೂ ನಿನ್ನೊಳಗೆ ಬರುವುದಿಲ್ಲ.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ದೇವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರ ಉಪಕಾರಮಾಡಲಿ, ಮಾನವರಿಗೆ ದೇವರು ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


“ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು.


“ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು.


ನಿನೆವೆಯೇ, ನಿನ್ನ ವಿಷಯವಾಗಿ ಯೆಹೋವ ದೇವರು ಆಜ್ಞಾಪಿಸುವುದೇನೆಂದರೆ: ಹೆಸರೆತ್ತಲು ನಿನಗೆ ಸಂತಾನವಿಲ್ಲದಂತೆ ಮಾಡುವೆನು. ನಿನ್ನ ದೇವರ ಮಂದಿರದಲ್ಲಿರುವ ಕೆತ್ತಿದ ವಿಗ್ರಹವನ್ನೂ, ಎರಕ ಬೊಂಬೆಯನ್ನೂ ನಾಶಮಾಡುವೆನು. ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.


ನಾನು ಮೊದಲನೆಯವನಾಗಿ ಚೀಯೋನಿಗೆ, ‘ಇಗೋ, ಅವರನ್ನು ನೋಡು’ ಎಂದು ಹೇಳಿ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.


ಮರುಭೂಮಿಯು, ಅದರ ಪಟ್ಟಣಗಳು ಘೋಷಿಸಲಿ. ಕೇದಾರ್ ಊರಿನ ನಿವಾಸಿಗಳು ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ. ಸೆಲ ಪಟ್ಟಣದವರೂ ಹರ್ಷಧ್ವನಿಗೈಯಲಿ; ಅವರು ಪರ್ವತದ ತುದಿಯಲ್ಲಿ ಆರ್ಭಟಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು