Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:3 - ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ದೂಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ತಾಳ್ಮೆಯುಳ್ಳ ದೇವರು ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೋ ಮೋಡಗಳ ಮೇಲೆ ನಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:3
33 ತಿಳಿವುಗಳ ಹೋಲಿಕೆ  

ನಮ್ಮ ಯೆಹೋವ ದೇವರು ದೊಡ್ಡವರು, ಬಹು ಶಕ್ತರು; ಅವರ ವಿವೇಕಕ್ಕೆ ಎಣೆಯಿಲ್ಲ.


ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.


ಯೆಹೋವ ದೇವರು ಕೃಪಾಳುವೂ, ಅನುಕಂಪವೂ, ದೀರ್ಘಶಾಂತಿಯೂ, ಪ್ರೀತಿ ಪೂರ್ಣರೂ ಆಗಿದ್ದಾರೆ.


ದೇವರು ನೀರಿನ ಮೇಲೆ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾರೆ. ಮೋಡಗಳನ್ನು ತಮ್ಮ ರಥವಾಗಿ ಮಾಡುತ್ತಾರೆ. ಗಾಳಿಯ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಾರೆ.


ಯೆಹೋವ ದೇವರು, ಅನುಕಂಪವೂ ದಯೆಯೂ ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ.


ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಇದಲ್ಲದೆ ಯೆಹೋವ ದೇವರು ಅವರ ಮೇಲೆ ಕಾಣಿಸಿಕೊಳ್ಳುವರು. ಆತನ ಬಾಣಗಳು ಮಿಂಚಿನ ಹಾಗೆ ಹೊರಡುವುವು. ಸಾರ್ವಭೌಮ ಯೆಹೋವ ದೇವರು ತುತೂರಿಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗುವರು.


ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.


ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?


ಯೆಹೋವ ದೇವರು ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು, ತಿರುಗಿಬೀಳುವುದನ್ನು ಮತ್ತು ಪಾಪವನ್ನು ಕ್ಷಮಿಸುವಾತನು, ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನೂ ಎಂದು ನೀವು ಹೇಳಿದ್ದೀರಲ್ಲಾ?


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.


“ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.


ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.


ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.


ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಹೀಗೆಂದು ಉತ್ತರಕೊಟ್ಟರು:


ಅದೇನೆಂದರೆ, ನಾನು ಒಂದು ವೇಳೆ ಪಾಪಮಾಡಿದರೆ, ನೀವು ಅದನ್ನು ಕಂಡುಹಿಡಿದು ನನ್ನ ಅಪರಾಧಕ್ಕಾಗಿ ನನ್ನನ್ನು ದಂಡಿಸದೇ ಬಿಡುವುದಿಲ್ಲ ಎಂಬುದೇ.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.


ನಮ್ಮ ದೇವರು ಬರುತ್ತಾರೆ, ಎಷ್ಟು ಮಾತ್ರವೂ ಮೌನವಾಗಿರುವುದಿಲ್ಲ. ಬೆಂಕಿಯು ಅವರ ಮುಂದೆ ಪ್ರಜ್ವಲಿಸುವುದು; ಅವರ ಸುತ್ತಲೂ ದೊಡ್ಡ ಬಿರುಗಾಳಿಯು ಬೀಸುವುದು.


ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು;


ಸೇನಾಧೀಶ್ವರ ಯೆಹೋವ ದೇವರು ಗುಡುಗಿನಿಂದಲೂ, ಮಹಾಶಬ್ದದಿಂದಲೂ, ಬಿರುಗಾಳಿ ಸುಳಿಗಾಳಿಯಿಂದಲೂ, ದಹಿಸುವ ಅಗ್ನಿಜ್ವಾಲೆಯಿಂದಲೂ ಪ್ರತ್ಯಕ್ಷರಾಗುವರು.


ಇಗೋ, ಮೇಘಗಳ ಹಾಗೆ ಏರಿ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು.


“ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು