Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:6 - ಕನ್ನಡ ಸಮಕಾಲಿಕ ಅನುವಾದ

6 ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:6
31 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.


ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.


ನೀವು ಭಯಭಕ್ತಿಗೆ ಪಾತ್ರರು, ನೀವು ಒಂದು ಸಾರಿ ಬೇಸರಗೊಂಡರೆ, ನಿಮ್ಮ ಮುಂದೆ ನಿಲ್ಲುವವನ್ಯಾರು?


ನಾನು ಈಜಿಪ್ಟಿಗೆ ಕಿಚ್ಚನ್ನು ಹಚ್ಚಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು. ತೆಬೆಸವು ಬಿರುಗಾಳಿಯಿಂದ ತೆಗೆದುಕೊಳ್ಳಲಾಗುವುದು, ನೋಫಿನ ಮೇಲೆ ನಿರಂತರವಾಗಿ ಇಕ್ಕಟ್ಟು ಇರುವುದು.


ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.


ಅವರು ಶತ್ರುವಿನ ಹಾಗೆಯೇ ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ. ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು, ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾರೆ. ಅವರು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಪುತ್ರಿಯ ಡೇರೆಯಲ್ಲಿ ಸುರಿದಿದ್ದಾರೆ.


ರೌದ್ರವು ನನ್ನಲ್ಲಿ ಇಲ್ಲ. ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ, ನಾನು ಅವುಗಳನ್ನು ಹಾದು ಹೋಗಿ, ಅವುಗಳನ್ನು ಒಟ್ಟಿಗೆ ಸುಡುವೆನು.


ಆದಕಾರಣ ಸೇನಾಧೀಶ್ವರ ಯೆಹೋವ ದೇವರು ಅವನ ಕೊಬ್ಬಿದ ಯೋಧರಿಗೆ ಕ್ಷಯವನ್ನು ಉಂಟುಮಾಡುವರು, ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವುದು.


ನಿಮ್ಮ ಕೋಪದ ಶಕ್ತಿಯನ್ನು ತಿಳಿದವರ‍್ಯಾರು? ನಿಮ್ಮ ಮೇಲಿನ ಭಯಭಕ್ತಿಗೆ ಕಾರಣವಾಗಿರುವ ನಿಮ್ಮ ಖಂಡನೆಯನ್ನು ಗ್ರಹಿಸುವವರ‍್ಯಾರು?


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ಆಗ ಯೆಹೋವ ದೇವರು, “ನೀನು ಹೊರಗೆ ಬಂದು ಬೆಟ್ಟದ ಮೇಲೆ ನನ್ನ ಮುಂದೆ ನಿಲ್ಲು. ಏಕೆಂದರೆ ನಾನು ನಿನ್ನ ಮುಂದೆ ಹಾದು ಹೋಗುತ್ತಿದ್ದೇನೆ,” ಎಂದನು. ಯೆಹೋವ ದೇವರ ಮುಂದೆ ಬೆಟ್ಟಗಳನ್ನು ಭೇದಿಸಿ, ಗುಡ್ಡಗಳನ್ನು ಒಡೆಯುವಂಥ ಮಹಾಬಲವಾದ ಗಾಳಿ, ಆ ಗಾಳಿಯಲ್ಲಿ ಯೆಹೋವ ದೇವರು ಇರಲಿಲ್ಲ. ಗಾಳಿಯ ತರುವಾಯ ಭೂಕಂಪವು, ಆ ಭೂಕಂಪದಲ್ಲಿ ಯೆಹೋವ ದೇವರು ಇರಲಿಲ್ಲ.


ನಾಲ್ಕನೆಯ ದೇವದೂತನು ತನ್ನ ಬೋಗುಣಿಯೊಳಗಿರುವುದನ್ನು ಸೂರ್ಯನ ಮೇಲೆ ಸುರಿಯಲು, ಸೂರ್ಯನಿಗೆ ಮನುಷ್ಯರನ್ನು ಬೆಂಕಿಯಿಂದ ಕಂದಿಸುವ ಅಧಿಕಾರ ಕೊಡಲಾಯಿತು.


ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.


ಏಕೆಂದರೆ, ಅವರ ಕೋಪಾಗ್ನಿಯ ಮಹಾದಿನವು ಬಂದಿದೆ, ಅದರ ಮುಂದೆ ಯಾರು ನಿಂತಾರು?” ಎಂದು ಹೇಳಿದರು.


ನಿನ್ನ ಕಡುಕೋಪವನ್ನು ಎಲ್ಲಾ ಗರ್ವಿಷ್ಠರ ಮೇಲೆ ಸುರಿಸಿ, ಅವರನ್ನು ತಗ್ಗಿಸು.


ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ, ನಿಮ್ಮ ಮುಂದೆ ಯಾರು ನಿಲ್ಲುವರು?


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರ ಕೋಪವೂ, ಅವರ ತೀಕ್ಷ್ಣರೋಷವೂ ಪ್ರಕಟವಾಗುವ ಆ ದಿನದಂದು, ಆಕಾಶಮಂಡಲ ನಡುಗುವುದು. ಭೂಮಂಡಲ ಅದರ ಸ್ಥಳದಿಂದ ಕದಲುವುದು.


ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.


ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, “ ‘ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.


ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.


ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.


ನಾನು ಮಾಗೋಗ್ ಮತ್ತು ಅವರೊಂದಿಗೆ ದ್ವೀಪಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ, ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.


ತೀರ್ಪು ಕಾರ್ಯಗತಗೊಳ್ಳುವ ಮುಂಚೆ ಮತ್ತು ಆ ದಿನವು ಗಾಳಿ ಬೀಸಿದ ಹೊಟ್ಟಿನಂತೆ ಹಾರಿಹೋಗುವುದಕ್ಕಿಂತ ಮುಂಚೆ ಯೆಹೋವ ದೇವರ ಉಗ್ರಕೋಪವು ನಿಮ್ಮ ಮೇಲೆ ಬರುವ ಮುಂಚೆ, ಯೆಹೋವ ದೇವರ ಕೋಪದ ದಿನವು ನಿಮ್ಮ ಮೇಲೆ ಬರುವ ಮುಂಚೆ,


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ದೇವರು ಪರ್ವತಗಳನ್ನು ಅವುಗಳಿಗೆ ತಿಳಿಯದ ಹಾಗೆ ಸರಿಸುತ್ತಾರೆ; ತಮ್ಮ ಎದುರಿನಲ್ಲಿ ಅವುಗಳನ್ನು ತಿರುಗಿಸುತ್ತಾರೆ.


ಆಕಾಶಮಂಡಲದ ಸ್ತಂಭಗಳು ಕಂಪಿಸುತ್ತವೆ; ದೇವರ ಗದರಿಕೆಗೆ ಅವು ಬೆರಗಾಗಿ ಕದಲುತ್ತವೆ.


ಪರಲೋಕದಿಂದ ನ್ಯಾಯ ನಿರ್ಣಯವನ್ನು ಮಾಡಿದ್ದೀರಿ. ದೇವರೇ, ನ್ಯಾಯತೀರಿಸುವುದಕ್ಕೂ


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


ಅವರು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಮುರಿದು ಹಾಕಿದ್ದಾರೆ. ಅವರು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾರೆ. ತನ್ನ ಸುತ್ತಲೂ ಇರುವವರನ್ನು ದಹಿಸುವ ಬೆಂಕಿಯಂತೆ, ಅವರು ಯಾಕೋಬನಿಗೆ ವಿರುದ್ಧವಾಗಿ ದಹಿಸಿಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು