Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಒಳ್ಳೆಯವರು. ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮರೆಹೊಕ್ಕವರನ್ನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಒಳ್ಳೆಯವನು. ಕಷ್ಟದ ಸಮಯದಲ್ಲಿ ಆತನು ಆಶ್ರಯಸ್ಥಾನ. ಆತನ ಮೇಲೆ ಭರವಸವಿಡುವವರನ್ನು ಸಂರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:7
53 ತಿಳಿವುಗಳ ಹೋಲಿಕೆ  

ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಆತನನ್ನು ನಿರೀಕ್ಷಿಸುವವರಿಗೂ, ಆತನನ್ನು ಹುಡಕುವವರಿಗೂ ಯೆಹೋವ ದೇವರು ಒಳ್ಳೆಯವರಾಗಿದ್ದಾರೆ.


“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.


ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.


ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು ತಮ್ಮ ಗುಡಾರದಲ್ಲಿ ಬಚ್ಚಿಡುವರು. ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು. ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.


ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?


ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ.


ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ನನ್ನ ಇಕ್ಕಟ್ಟಿನ ದಿವಸದಲ್ಲಿ ನಿಮ್ಮನ್ನು ಕರೆಯುವೆನು. ನೀವು ನನಗೆ ಉತ್ತರ ಕೊಡುವಿರಿ.


ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.


ಯೆಹೋವ ದೇವರು ಒಳ್ಳೆಯವರೂ ನ್ಯಾಯವುಳ್ಳವರೂ ಆಗಿದ್ದಾರೆ; ಆದ್ದರಿಂದ ಅವರು ಪಾಪಿಗಳಿಗೆ ತಮ್ಮ ಮಾರ್ಗಗಳನ್ನು ಬೋಧಿಸುತ್ತಾರೆ.


ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.


ನಾನು ಯಾವಾಗಲೂ ಆಶ್ರಯಿಸಿಕೊಳ್ಳುವ ಬಂಡೆಯಾಗಿರಿ. ನನ್ನನ್ನು ರಕ್ಷಿಸುವುದಕ್ಕೆ ಆಜ್ಞಾಪಿಸಿರಿ. ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ ಆಗಿದ್ದೀರಿ.


ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.


ಆದರೆ ನಾನು ನಿಮ್ಮ ಬಲವನ್ನು ಕುರಿತು ಹಾಡುವೆನು. ಹೌದು, ಮುಂಜಾನೆ ನಿಮ್ಮ ಪ್ರೀತಿಯ ಕುರಿತು ಹಾಡುವೆನು. ಏಕೆಂದರೆ ನೀವು ನನಗೆ ಭದ್ರಕೋಟೆಯೂ, ನನ್ನ ಇಕ್ಕಟ್ಟಿನಲ್ಲಿ ಆಶ್ರಯವಾಗಿಯೂ ಇದ್ದೀರಿ.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.


ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.


ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.


ಈತನು ದೇವರಲ್ಲಿ ಭರವಸೆ ಇಟ್ಟಿದ್ದಾನೆ. ದೇವರಿಗೆ ಈತನಲ್ಲಿ ಇಷ್ಟವಿದ್ದರೆ, ದೇವರೇ ಈತನನ್ನು ಈಗ ಬಿಡಿಸಲಿ, ಏಕೆಂದರೆ ಈತನು, ‘ನಾನು ದೇವಪುತ್ರನು’ ಎಂದು ಹೇಳಿದ್ದಾನೆ,” ಎಂದರು.


ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’ ಎಂದು ಹೇಳಿಬಿಡುವೆನು.


ಪರಸ್ಪರವಾಗಿ ಹಾಡುತ್ತಾ, ಕೃತಜ್ಞತಾಸ್ತುತಿ ಮಾಡುತ್ತಾ ಯೆಹೋವ ದೇವರನ್ನು ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು! ಅವರ ಅಚಲ ಪ್ರೀತಿ ಇಸ್ರಾಯೇಲರ ಮೇಲೆ ಶಾಶ್ವತ!” ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ, ಯೆಹೋವ ದೇವರ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.


‘ನಮ್ಮ ದೇವರಾದ ಯೆಹೋವ ದೇವರು ಅಸ್ಸೀರಿಯದ ಅರಸನ ಕೈಯಿಂದ ನಮ್ಮನ್ನು ಬಿಡಿಸುವರು,’ ಎಂದು ಹಿಜ್ಕೀಯನು ಹೇಳಿ, ನಿಮ್ಮನ್ನು ಹಸಿವೆ ಮತ್ತು ದಾಹದಿಂದ ಸಾಯಿಸುವುದಕ್ಕೆ ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?


ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.


ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು.


ಯೆಹೋವ ದೇವರು ಇಕ್ಕಟ್ಟಿನಲ್ಲಿ ನಿಮಗೆ ಉತ್ತರವನ್ನು ನೀಡಲಿ; ಯಾಕೋಬನ ದೇವರ ಹೆಸರು ನಿಮ್ಮನ್ನು ಕಾಪಾಡಲಿ.


ನೀತಿವಂತರ ರಕ್ಷಣೆಯು ಯೆಹೋವ ದೇವರಿಂದಲೇ; ಇಕ್ಕಟ್ಟಿನ ಕಾಲದಲ್ಲಿ ದೇವರೇ ಅವರ ಕೋಟೆ.


ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು. ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು. ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ನೀವು ನನ್ನನ್ನು ಭಯಪಡಿಸಬೇಡಿ. ಕೇಡಿನ ದಿನದಲ್ಲಿ ನೀವೇ ನನ್ನ ಆಶ್ರಯವಾಗಿದ್ದೀರಿ.


“ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುವುದನ್ನು ಕೇಳು, ‘ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳುಹಿಸಿಬಿಟ್ಟು, ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂತವರು. ನಾನು ಅವರನ್ನು ಒಳ್ಳೆಯವರಂತೆ ಪರಿಗಣಿಸುತ್ತೇನೆ.


ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.


ಆದರೆ ನಿನ್ನ ಮಧ್ಯದಲ್ಲಿ ಸೌಮ್ಯರನ್ನೂ ದೀನರನ್ನೂ ಉಳಿಸುವೆನು. ಇವರು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಡುವರು.


ಹೀಗೆ ಆ ಕಾಲದಲ್ಲಿ ಇಸ್ರಾಯೇಲರು ತಗ್ಗಿಹೋದರು. ಆದರೆ ಯೆಹೂದದವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಮೇಲೆ ಆತುಕೊಂಡದ್ದರಿಂದ ಜಯ ಹೊಂದಿದರು.


ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.


ಆದ್ದರಿಂದ ಭೂಮಿಯು ಕಂಪಿಸಿದರೂ ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ,


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು