Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:11 - ಕನ್ನಡ ಸಮಕಾಲಿಕ ಅನುವಾದ

11 ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:11
27 ತಿಳಿವುಗಳ ಹೋಲಿಕೆ  

ಕೃಪೆಮಾಡಿ ನನಗೆ ಕಿವಿಗೊಡಿರಿ, ಕಟಾಕ್ಷಿಸಿ ನೋಡಿರಿ, ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿರಿ. ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಾಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ. ಅವರು ನಿಮಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ. ನಾನೂ, ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.


ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷದ, ನಿಸಾನ ತಿಂಗಳಲ್ಲಿ, ಅವನ ಮುಂದೆ ದ್ರಾಕ್ಷಾರಸವನ್ನು ತೆಗೆದುಕೊಂಡು ಅರಸನಿಗೆ ಕೊಟ್ಟೆನು. ನಾನು ಅವನ ಸಮ್ಮುಖದಲ್ಲಿ ಹಿಂದೆ ಎಂದೂ ದುಃಖಿತನಾಗಿದ್ದಿಲ್ಲ.


ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಶುದ್ಧಮನಸ್ಸಾಕ್ಷಿಯಿಂದ ಪ್ರತಿಯೊಂದರಲ್ಲಿಯೂ ಪ್ರಾಮಾಣಿಕವಾಗಿ ಇರಲು ಬಯಸುತ್ತೇವೆ.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ. ನನ್ನ ಕೂಗಿಗೆ ಕರುಣೆ ತೋರಿಸಿ, ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ.


ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.


ಯೆಹೋವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡಿರಿ. ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸಿರಿ.


ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ:


ಮುಖ್ಯ ಪಾನದಾಯಕನನ್ನು ತಿರುಗಿ ಉದ್ಯೋಗದಲ್ಲಿ ಇರಿಸಿದ್ದರಿಂದ, ಮತ್ತೆ ಅವನು ಫರೋಹನ ಕೈಗೆ ಪಾನಪಾತ್ರೆಯನ್ನು ಕೊಟ್ಟನು.


ಆದರೂ ಪಾನದಾಯಕರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.


ಆಗ ಪಾನದಾಯಕರ ಮುಖ್ಯಸ್ಥನು ಫರೋಹನಿಗೆ, “ಈ ಹೊತ್ತು ನನ್ನ ತಪ್ಪನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.


ನನ್ನ ಅಣ್ಣ ಏಸಾವನ ಕೈಯಿಂದ ನನ್ನನ್ನು ತಪ್ಪಿಸಿರಿ. ಏಕೆಂದರೆ ಅವನು ಬಂದು ನನ್ನನ್ನೂ, ಮಕ್ಕಳೊಂದಿಗೆ ತಾಯಂದಿರನ್ನೂ, ದಾಳಿಮಾಡುವನು ಎಂದು ನಾನು ಅವನಿಗೆ ಭಯಪಡುತ್ತೇನೆ.


ಏಕೆಂದರೆ ಅವರು ಅರಿವನ್ನು ಹಗೆಮಾಡಿ, ಯೆಹೋವ ದೇವರಿಗೆ ಭಯಪಡುವುದನ್ನು ಆರಿಸಿಕೊಳ್ಳದೆ ಹೋದರು.


ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ, ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿಕೊಂಡು,


“ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ, ‘ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರೇ, ನೀವು ಬಯಸಿದರೆ, ದಯವಿಟ್ಟು ನಾನು ಬಂದ ಪ್ರಯಾಣಕ್ಕೆ ನೀವು ಸಫಲ ಮಾಡಿದ್ದಾದರೆ,


ಕೆಲವು ಸಮಯದ ನಂತರ ಈಜಿಪ್ಟಿನ ಅರಸನ ಪಾನದಾಯಕನೂ, ರೊಟ್ಟಿಗಾರನೂ ತಮ್ಮ ಅರಸನಿಗೆ ಎದುರಾಗಿ ಅಪರಾಧ ಮಾಡಿದರು.


“ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿಮ್ಮ ಕಣ್ಣುಗಳು ತೆರೆದಿರಲಿ. ನಿಮ್ಮ ಕಿವಿಗಳು ಆಲಿಸುತ್ತಾ ಇರಲಿ.


ದೇವರೇ, ನೀವು ನನ್ನ ಹರಕೆಗಳನ್ನು ಕೇಳಿದ್ದೀರಿ. ನಿಮ್ಮ ಹೆಸರಿಗೆ ಭಯಪಡುವವರಿಗೆ ಕೊಡುವ ಸೊತ್ತನ್ನು ನನಗೂ ಕೊಟ್ಟಿದ್ದೀರಿ.


ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.


ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ನಿಮ್ಮನ್ನು ಕರುಣಿಸಿ, ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡುವನು.’


ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು