Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:2 - ಕನ್ನಡ ಸಮಕಾಲಿಕ ಅನುವಾದ

2 ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆ ಹೋದವರಿಂದ ಉಳಿದಿರುವ ಯೆಹೂದ್ಯರ ಮತ್ತು ಯೆರೂಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಸಹೋದರಲ್ಲಿ ಒಬ್ಬನಾದ ಹನಾನೀಯನೂ, ಬೇರೆ ಕೆಲವರು ಯೆಹೂದ ಜನರೊಂದಿಗೆ, ನನ್ನ ಬಳಿಗೆ ಬಂದರು. ಸೆರೆಯಾಳುಗಳಾಗಿ ಹೋಗಿದ್ದವರಲ್ಲಿ ಕೆಲವು ಯೆಹೂದ್ಯರು ತಪ್ಪಿಸಿಕೊಂಡು ನನ್ನ ಬಳಿಗೆ ಬಂದಾಗ ಯೆರೂಸಲೇಮಿನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಜುದೇಯದಿಂದ ನನ್ನ ಬಳಿಗೆ ಬಂದರು. ಸೆರೆಹೋದವರಿಂದ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಜೆರುಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನೂ ಬೇರೆ ಕೆಲವು ಜನರೂ ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆಯವರೊಳಗೆ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಯೆರೂಸಲೇವಿುನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಶೂಷನ್‌ನಲ್ಲಿದ್ದಾಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀ ಮತ್ತು ಇನ್ನಿತರರು ಯೆಹೂದ ಪ್ರಾಂತ್ಯದಿಂದ ಬಂದಿದ್ದರು. ನಾನು ಅಲ್ಲಿರುವ ಯೆಹೂದ್ಯರ ಯೋಗಕ್ಷೇಮದ ಬಗ್ಗೆ ವಿಚಾರಿಸಿದೆನು. ಈ ಯೆಹೂದ್ಯರು ಸೆರೆವಾಸದಿಂದ ತಪ್ಪಿಸಿಕೊಂಡು ಇನ್ನೂ ಯೆಹೂದದಲ್ಲಿ ವಾಸವಾಗಿದ್ದರು. ಜೆರುಸಲೇಮ್ ನಗರದ ವಿಷಯವಾಗಿಯೂ ವಿಚಾರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:2
12 ತಿಳಿವುಗಳ ಹೋಲಿಕೆ  

ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.


ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.


ಈಜಿಪ್ಟ್ ದೇಶಕ್ಕೆ ಅಲ್ಲಿ ವಾಸಿಸುವುದಕ್ಕೆ ಹೋಗಿರುವ ಯೆಹೂದದ ಉಳಿದಿರುವವರು ತಾವು ತಿರುಗಿಕೊಂಡು, ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿದರೂ, ಒಬ್ಬನಾದರೂ ಯೆಹೂದ ದೇಶಕ್ಕೆ ಹಿಂದಿರುಗುವುದಿಲ್ಲ. ಓಡಿಹೋಗುವ ಸ್ವಲ್ಪ ಜನರೇ ಅಲ್ಲದೆ ಇನ್ಯಾರೂ ಹಿಂತಿರುಗುವುದಿಲ್ಲ,” ಎಂಬುದು.


ನಾವು ನಿಮ್ಮ ಆಜ್ಞೆಗಳನ್ನು ಪುನಃ ಮೀರಿ ಅಸಹ್ಯ ಅಭ್ಯಾಸಕರಾದ ಈ ಜನರ ಸಂಗಡ ವಿವಾಹ ಸಂಬಂಧ ಮಾಡಬಹುದೇ? ಹಾಗೆ ಮಾಡಿದರೆ, ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದಂತೆ ದಂಡಿಸಲು, ನೀವು ನಮ್ಮ ಮೇಲೆ ಕೋಪಗೊಳ್ಳುವುದು ಯೋಗ್ಯವೇ?


ಸಿದ್ದೀಮ್ ತಗ್ಗು ಕಲ್ಲರಗಿನ ಕೆಸರುಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗಿ ಅದರಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.


ಅವನು ಯೆರೂಸಲೇಮಿನವರೆಲ್ಲರನ್ನೂ, ಸಮಸ್ತ ಪ್ರಧಾನರನ್ನೂ, ಸಮಸ್ತ ಸ್ಥಿತಿಯುಳ್ಳ ಪರಾಕ್ರಮಶಾಲಿಗಳನ್ನೂ, ಹತ್ತು ಸಾವಿರ ಸೆರೆಯವರನ್ನೂ ಮತ್ತು ಸಮಸ್ತ ಕೌಶಲಗಾರರನ್ನೂ, ಕಮ್ಮಾರರನ್ನೂ ಅಲ್ಲಿಂದ ಒಯ್ದನು. ದೇಶದಲ್ಲಿ ಬಡವರು ಹೊರತು ಉಳಿದವರು ಯಾರೂ ಇರಲಿಲ್ಲ.


ಆದರೆ ಕಾವಲಿನ ಅಧಿಪತಿಯು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು